Advertisement
ವಿಶೇಷ ವರದಿಗಳು

ಎಲಿಮಲೆ- ಮರ್ಕಂಜ-ಅರಂತೋಡು ರಸ್ತೆ ಅಗಲೀಕರಣಕ್ಕಾಗಿ 3 ಕೋಟಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿ…?

Share

ಎಲಿಮಲೆ:  ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ಅಗಲೀಕರಣ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ.

ಪ್ರಸಿದ್ದ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಯಾತ್ರಾರ್ಥಿಗಳು ಓಡಾಡುತ್ತಾರೆ. ಮಡಿಕೇರಿ, ಮೈಸೂರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅತ್ಯಂತ ಕಡಿದಾಗಿದ್ದು, ಭಾರೀ ವಾಹನಗಳು ಮುಖಾಮುಖಿಯಾದರೆ ದಾರಿ ಬಿಟ್ಟುಕೊಡಲು ಕಷ್ಟವಾಗುತ್ತದೆ. ರಸ್ತೆ ತಿರುವುನಿಂದ ಕೂಡಿದ್ದು, ಎದುರಿನಿಂದ ಬರುವ ವಾಹನಗಳು ಎದುರಾಗಿ ಅಪಘಾತಗಳೂ ಸಂಭವಿಸಿವೆ.

 

 

 

15 ಕಿ.ಮೀ ಉಳಿಕೆ:

ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿಮೀನಷ್ಟು ಉಳಿತಾಯವಾಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ಅಗಲೀಕರಣ ಕಡತದಲ್ಲಿಯೇ ಬಾಕಿ:

ಬಹುಪಯೋಗಿ ಎಲಿಮಲೆ- ಮರ್ಕಂಜ -ಅರಂತೋಡು ರಸ್ತೆ ಅಗಲೀಕರಣಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು 2 ವರ್ಷಗಳ ಹಿಂದೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅನುದಾನ ಮಂಜೂರುಗೊಳ್ಳದೇ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ರಸ್ತೆಯನ್ನು ಎಲಿಮಲೆಯಿಂದ ಮರ್ಕಂಜದವರೆಗೆ 5 ಕಿ.ಮೀನಷ್ಟು ಅಗಲೀಕರಣ ಮಾಡಲು ಈ ಹಿಂದೆ ಸಿಆರ್‍ಏಫ್‍ನಿಂದ 3 ಕೋ.ರೂ ಮಂಜೂರುಗೊಂಡು ಟೆಂಡರ್ ಪ್ರಕ್ರಿಯೆ ಕೂಡಾ ಮುಗಿದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯಬೇಕಿದ್ದ ಈ ಕಾಮಗಾರಿಯ ಟೆಂಡರ್ ಪಡೆದುಕೊಂಡ ಗುತ್ತಿಗೆದಾರ ನಿಧನ ಹೊಂದಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ ಇದೀಗ ಕಾಮಗಾರಿ ಮತ್ತೆ ಪ್ರಾರಂಭಿಸಲು ರಿಟೆಂಡರ್ ಮಾಡಬೇಕಿದೆ.

ಸೇವಾಜೆಯಲ್ಲಿ ನಿರ್ಮಾಣವಾಗಲಿದೆ ಹೊಸ ಸೇತುವೆ:

ಅತ್ಯಂತ ಕಡಿದಾಗಿರುವ ಹಳೆಯ ಸೇತುವೆಯನ್ನು ಕೆಡವಿ ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ. ಇದಕ್ಕಗಿ 2.25 ಕೋಟಿ ರೂ.ಗಳ ಪ್ರಸ್ತಾವನೆ ಮಂಜೂರುಗೊಂಡಿದ್ದು ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

 

  • ಕೃಷ್ಣಪ್ರಸಾದ್  ಕೊಲ್ಚಾರ್
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

5 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

5 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

6 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

14 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

14 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

15 hours ago