Advertisement
ವಿಶೇಷ ವರದಿಗಳು

ಎಲಿಮಲೆ- ಮರ್ಕಂಜ-ಅರಂತೋಡು ರಸ್ತೆ ಅಗಲೀಕರಣಕ್ಕಾಗಿ 3 ಕೋಟಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿ…?

Share

ಎಲಿಮಲೆ:  ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ಅಗಲೀಕರಣ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ.

ಪ್ರಸಿದ್ದ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಯಾತ್ರಾರ್ಥಿಗಳು ಓಡಾಡುತ್ತಾರೆ. ಮಡಿಕೇರಿ, ಮೈಸೂರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅತ್ಯಂತ ಕಡಿದಾಗಿದ್ದು, ಭಾರೀ ವಾಹನಗಳು ಮುಖಾಮುಖಿಯಾದರೆ ದಾರಿ ಬಿಟ್ಟುಕೊಡಲು ಕಷ್ಟವಾಗುತ್ತದೆ. ರಸ್ತೆ ತಿರುವುನಿಂದ ಕೂಡಿದ್ದು, ಎದುರಿನಿಂದ ಬರುವ ವಾಹನಗಳು ಎದುರಾಗಿ ಅಪಘಾತಗಳೂ ಸಂಭವಿಸಿವೆ.

 

 

 

15 ಕಿ.ಮೀ ಉಳಿಕೆ:

ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿಮೀನಷ್ಟು ಉಳಿತಾಯವಾಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ಅಗಲೀಕರಣ ಕಡತದಲ್ಲಿಯೇ ಬಾಕಿ:

ಬಹುಪಯೋಗಿ ಎಲಿಮಲೆ- ಮರ್ಕಂಜ -ಅರಂತೋಡು ರಸ್ತೆ ಅಗಲೀಕರಣಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು 2 ವರ್ಷಗಳ ಹಿಂದೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅನುದಾನ ಮಂಜೂರುಗೊಳ್ಳದೇ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ರಸ್ತೆಯನ್ನು ಎಲಿಮಲೆಯಿಂದ ಮರ್ಕಂಜದವರೆಗೆ 5 ಕಿ.ಮೀನಷ್ಟು ಅಗಲೀಕರಣ ಮಾಡಲು ಈ ಹಿಂದೆ ಸಿಆರ್‍ಏಫ್‍ನಿಂದ 3 ಕೋ.ರೂ ಮಂಜೂರುಗೊಂಡು ಟೆಂಡರ್ ಪ್ರಕ್ರಿಯೆ ಕೂಡಾ ಮುಗಿದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯಬೇಕಿದ್ದ ಈ ಕಾಮಗಾರಿಯ ಟೆಂಡರ್ ಪಡೆದುಕೊಂಡ ಗುತ್ತಿಗೆದಾರ ನಿಧನ ಹೊಂದಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ ಇದೀಗ ಕಾಮಗಾರಿ ಮತ್ತೆ ಪ್ರಾರಂಭಿಸಲು ರಿಟೆಂಡರ್ ಮಾಡಬೇಕಿದೆ.

ಸೇವಾಜೆಯಲ್ಲಿ ನಿರ್ಮಾಣವಾಗಲಿದೆ ಹೊಸ ಸೇತುವೆ:

ಅತ್ಯಂತ ಕಡಿದಾಗಿರುವ ಹಳೆಯ ಸೇತುವೆಯನ್ನು ಕೆಡವಿ ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ. ಇದಕ್ಕಗಿ 2.25 ಕೋಟಿ ರೂ.ಗಳ ಪ್ರಸ್ತಾವನೆ ಮಂಜೂರುಗೊಂಡಿದ್ದು ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

 

  • ಕೃಷ್ಣಪ್ರಸಾದ್  ಕೊಲ್ಚಾರ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

3 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

12 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

12 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

14 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

17 hours ago