Advertisement
ವಿಶೇಷ ವರದಿಗಳು

ಎಲಿಮಲೆ- ಮರ್ಕಂಜ-ಅರಂತೋಡು ರಸ್ತೆ ಅಗಲೀಕರಣಕ್ಕಾಗಿ 3 ಕೋಟಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿ…?

Share

ಎಲಿಮಲೆ:  ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ಅಗಲೀಕರಣ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ.

ಪ್ರಸಿದ್ದ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಯಾತ್ರಾರ್ಥಿಗಳು ಓಡಾಡುತ್ತಾರೆ. ಮಡಿಕೇರಿ, ಮೈಸೂರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅತ್ಯಂತ ಕಡಿದಾಗಿದ್ದು, ಭಾರೀ ವಾಹನಗಳು ಮುಖಾಮುಖಿಯಾದರೆ ದಾರಿ ಬಿಟ್ಟುಕೊಡಲು ಕಷ್ಟವಾಗುತ್ತದೆ. ರಸ್ತೆ ತಿರುವುನಿಂದ ಕೂಡಿದ್ದು, ಎದುರಿನಿಂದ ಬರುವ ವಾಹನಗಳು ಎದುರಾಗಿ ಅಪಘಾತಗಳೂ ಸಂಭವಿಸಿವೆ.

Advertisement

 

 

Advertisement

 

Advertisement

15 ಕಿ.ಮೀ ಉಳಿಕೆ:

ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿಮೀನಷ್ಟು ಉಳಿತಾಯವಾಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

Advertisement

ಅಗಲೀಕರಣ ಕಡತದಲ್ಲಿಯೇ ಬಾಕಿ:

ಬಹುಪಯೋಗಿ ಎಲಿಮಲೆ- ಮರ್ಕಂಜ -ಅರಂತೋಡು ರಸ್ತೆ ಅಗಲೀಕರಣಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು 2 ವರ್ಷಗಳ ಹಿಂದೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅನುದಾನ ಮಂಜೂರುಗೊಳ್ಳದೇ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ರಸ್ತೆಯನ್ನು ಎಲಿಮಲೆಯಿಂದ ಮರ್ಕಂಜದವರೆಗೆ 5 ಕಿ.ಮೀನಷ್ಟು ಅಗಲೀಕರಣ ಮಾಡಲು ಈ ಹಿಂದೆ ಸಿಆರ್‍ಏಫ್‍ನಿಂದ 3 ಕೋ.ರೂ ಮಂಜೂರುಗೊಂಡು ಟೆಂಡರ್ ಪ್ರಕ್ರಿಯೆ ಕೂಡಾ ಮುಗಿದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯಬೇಕಿದ್ದ ಈ ಕಾಮಗಾರಿಯ ಟೆಂಡರ್ ಪಡೆದುಕೊಂಡ ಗುತ್ತಿಗೆದಾರ ನಿಧನ ಹೊಂದಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ ಇದೀಗ ಕಾಮಗಾರಿ ಮತ್ತೆ ಪ್ರಾರಂಭಿಸಲು ರಿಟೆಂಡರ್ ಮಾಡಬೇಕಿದೆ.

Advertisement

ಸೇವಾಜೆಯಲ್ಲಿ ನಿರ್ಮಾಣವಾಗಲಿದೆ ಹೊಸ ಸೇತುವೆ:

ಅತ್ಯಂತ ಕಡಿದಾಗಿರುವ ಹಳೆಯ ಸೇತುವೆಯನ್ನು ಕೆಡವಿ ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ. ಇದಕ್ಕಗಿ 2.25 ಕೋಟಿ ರೂ.ಗಳ ಪ್ರಸ್ತಾವನೆ ಮಂಜೂರುಗೊಂಡಿದ್ದು ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

Advertisement

 

  • ಕೃಷ್ಣಪ್ರಸಾದ್  ಕೊಲ್ಚಾರ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

3 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

5 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

11 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

17 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

18 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 day ago