Advertisement
ವಿಶೇಷ ವರದಿಗಳು

ಎಲಿಮಲೆ- ಮರ್ಕಂಜ-ಅರಂತೋಡು ರಸ್ತೆ ಅಗಲೀಕರಣಕ್ಕಾಗಿ 3 ಕೋಟಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿ…?

Share

ಎಲಿಮಲೆ:  ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ಅಗಲೀಕರಣ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ.

ಪ್ರಸಿದ್ದ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಯಾತ್ರಾರ್ಥಿಗಳು ಓಡಾಡುತ್ತಾರೆ. ಮಡಿಕೇರಿ, ಮೈಸೂರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅತ್ಯಂತ ಕಡಿದಾಗಿದ್ದು, ಭಾರೀ ವಾಹನಗಳು ಮುಖಾಮುಖಿಯಾದರೆ ದಾರಿ ಬಿಟ್ಟುಕೊಡಲು ಕಷ್ಟವಾಗುತ್ತದೆ. ರಸ್ತೆ ತಿರುವುನಿಂದ ಕೂಡಿದ್ದು, ಎದುರಿನಿಂದ ಬರುವ ವಾಹನಗಳು ಎದುರಾಗಿ ಅಪಘಾತಗಳೂ ಸಂಭವಿಸಿವೆ.

 

 

 

15 ಕಿ.ಮೀ ಉಳಿಕೆ:

ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿಮೀನಷ್ಟು ಉಳಿತಾಯವಾಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ಅಗಲೀಕರಣ ಕಡತದಲ್ಲಿಯೇ ಬಾಕಿ:

ಬಹುಪಯೋಗಿ ಎಲಿಮಲೆ- ಮರ್ಕಂಜ -ಅರಂತೋಡು ರಸ್ತೆ ಅಗಲೀಕರಣಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು 2 ವರ್ಷಗಳ ಹಿಂದೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅನುದಾನ ಮಂಜೂರುಗೊಳ್ಳದೇ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ರಸ್ತೆಯನ್ನು ಎಲಿಮಲೆಯಿಂದ ಮರ್ಕಂಜದವರೆಗೆ 5 ಕಿ.ಮೀನಷ್ಟು ಅಗಲೀಕರಣ ಮಾಡಲು ಈ ಹಿಂದೆ ಸಿಆರ್‍ಏಫ್‍ನಿಂದ 3 ಕೋ.ರೂ ಮಂಜೂರುಗೊಂಡು ಟೆಂಡರ್ ಪ್ರಕ್ರಿಯೆ ಕೂಡಾ ಮುಗಿದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯಬೇಕಿದ್ದ ಈ ಕಾಮಗಾರಿಯ ಟೆಂಡರ್ ಪಡೆದುಕೊಂಡ ಗುತ್ತಿಗೆದಾರ ನಿಧನ ಹೊಂದಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ ಇದೀಗ ಕಾಮಗಾರಿ ಮತ್ತೆ ಪ್ರಾರಂಭಿಸಲು ರಿಟೆಂಡರ್ ಮಾಡಬೇಕಿದೆ.

ಸೇವಾಜೆಯಲ್ಲಿ ನಿರ್ಮಾಣವಾಗಲಿದೆ ಹೊಸ ಸೇತುವೆ:

ಅತ್ಯಂತ ಕಡಿದಾಗಿರುವ ಹಳೆಯ ಸೇತುವೆಯನ್ನು ಕೆಡವಿ ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ. ಇದಕ್ಕಗಿ 2.25 ಕೋಟಿ ರೂ.ಗಳ ಪ್ರಸ್ತಾವನೆ ಮಂಜೂರುಗೊಂಡಿದ್ದು ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

 

  • ಕೃಷ್ಣಪ್ರಸಾದ್  ಕೊಲ್ಚಾರ್
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

2 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

3 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

1 day ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago