Advertisement
ವಿಶೇಷ ವರದಿಗಳು

ಎಲಿಮಲೆ- ಮರ್ಕಂಜ-ಅರಂತೋಡು ರಸ್ತೆ ಅಗಲೀಕರಣಕ್ಕಾಗಿ 3 ಕೋಟಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿ…?

Share

ಎಲಿಮಲೆ:  ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ಅಗಲೀಕರಣ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ.

ಪ್ರಸಿದ್ದ ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಯಾತ್ರಾರ್ಥಿಗಳು ಓಡಾಡುತ್ತಾರೆ. ಮಡಿಕೇರಿ, ಮೈಸೂರುಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅತ್ಯಂತ ಕಡಿದಾಗಿದ್ದು, ಭಾರೀ ವಾಹನಗಳು ಮುಖಾಮುಖಿಯಾದರೆ ದಾರಿ ಬಿಟ್ಟುಕೊಡಲು ಕಷ್ಟವಾಗುತ್ತದೆ. ರಸ್ತೆ ತಿರುವುನಿಂದ ಕೂಡಿದ್ದು, ಎದುರಿನಿಂದ ಬರುವ ವಾಹನಗಳು ಎದುರಾಗಿ ಅಪಘಾತಗಳೂ ಸಂಭವಿಸಿವೆ.

 

 

 

15 ಕಿ.ಮೀ ಉಳಿಕೆ:

ಸುಬ್ರಹ್ಮಣ್ಯಕ್ಕೆ ಹೋಗಲು ಸುಳ್ಯ ಬಳಸಿ ಪ್ರಯಾಣಿಸಿದರೆ ಸುಮಾರು 74 ಕಿ.ಮೀ ಇದ್ದು ಅರಂತೋಡಿನಿಂದ ಅಡ್ತಲೆ ಮರ್ಕಂಜ ಮಾರ್ಗವಾಗಿ ಪ್ರಯಾಣಿಸಿದರೆ ಸುಮಾರು 15 ಕಿಮೀನಷ್ಟು ಉಳಿತಾಯವಾಗುತ್ತದೆ. ಆದ್ದರಿಂದ ಬಹುತೇಕ ಪ್ರವಾಸಿಗರು ಇದೇ ಮಾರ್ಗವನ್ನು ಬಳಸುತ್ತಾರೆ. ಆದರೆ ಇದರಲ್ಲಿ ಪ್ರಯಾಣಿಸುವುದು ಮಾತ್ರ ಬಹಳ ಪ್ರಯಾಸವೇ ಸರಿ.

ಅಗಲೀಕರಣ ಕಡತದಲ್ಲಿಯೇ ಬಾಕಿ:

ಬಹುಪಯೋಗಿ ಎಲಿಮಲೆ- ಮರ್ಕಂಜ -ಅರಂತೋಡು ರಸ್ತೆ ಅಗಲೀಕರಣಕ್ಕೆ ಹಲವು ವರ್ಷಗಳಿಂದ ಬೇಡಿಕೆ ಇದ್ದು 2 ವರ್ಷಗಳ ಹಿಂದೆ ಪ್ರಸ್ತಾವನೆ ನೀಡಲಾಗಿತ್ತು. ಆದರೆ ಅನುದಾನ ಮಂಜೂರುಗೊಳ್ಳದೇ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ರಸ್ತೆಯನ್ನು ಎಲಿಮಲೆಯಿಂದ ಮರ್ಕಂಜದವರೆಗೆ 5 ಕಿ.ಮೀನಷ್ಟು ಅಗಲೀಕರಣ ಮಾಡಲು ಈ ಹಿಂದೆ ಸಿಆರ್‍ಏಫ್‍ನಿಂದ 3 ಕೋ.ರೂ ಮಂಜೂರುಗೊಂಡು ಟೆಂಡರ್ ಪ್ರಕ್ರಿಯೆ ಕೂಡಾ ಮುಗಿದಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯಬೇಕಿದ್ದ ಈ ಕಾಮಗಾರಿಯ ಟೆಂಡರ್ ಪಡೆದುಕೊಂಡ ಗುತ್ತಿಗೆದಾರ ನಿಧನ ಹೊಂದಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ ಇದೀಗ ಕಾಮಗಾರಿ ಮತ್ತೆ ಪ್ರಾರಂಭಿಸಲು ರಿಟೆಂಡರ್ ಮಾಡಬೇಕಿದೆ.

ಸೇವಾಜೆಯಲ್ಲಿ ನಿರ್ಮಾಣವಾಗಲಿದೆ ಹೊಸ ಸೇತುವೆ:

ಅತ್ಯಂತ ಕಡಿದಾಗಿರುವ ಹಳೆಯ ಸೇತುವೆಯನ್ನು ಕೆಡವಿ ಸೇವಾಜೆಯಲ್ಲಿ ನೂತನ ಸೇತುವೆ ನಿರ್ಮಾಣವಾಗಲಿದೆ. ಇದಕ್ಕಗಿ 2.25 ಕೋಟಿ ರೂ.ಗಳ ಪ್ರಸ್ತಾವನೆ ಮಂಜೂರುಗೊಂಡಿದ್ದು ಕಾಮಗಾರಿ ಅತೀ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ.

 

  • ಕೃಷ್ಣಪ್ರಸಾದ್  ಕೊಲ್ಚಾರ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 hour ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago