ಎಲಿಮಲೆ: ವಿದ್ಯಾರ್ಥಿ ಪೋಲೀಸ್ ಕ್ಯಾಡೆಟ್ ಕಾರ್ಯಕ್ರಮದ ಅಂಗವಾಗಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿನ ವಿದ್ಯಾರ್ಥಿಗಳಿಂದ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೊಂದು ಭೇಟಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ್ ಪೇರಾಲು, ಸಹಶಿಕ್ಷಕರಾದ ರಾಜೇಶ್ವರಿ ಕೇನಾಜೆ, ಶಿಕ್ಷಕ ವಸಂತ, ಪೋಲೀಸ್ ಅಧಿಕಾರಿ ಅನಿಲ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಮ್ ಕಣೆಮರಡ್ಕ ಗ್ರಂಥಾಲಯದ ಮಾಹಿತಿ, ಪುಸ್ತಕ ನಿರ್ವಹಣೆ ಮತ್ತು ಓದುವಿಕೆಯ ಮಹತ್ವ ,ಗ್ರಂಥಾಲಯದ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯರು ಮಾತನಾಡಿ ಗ್ರಂಥಾಲಯದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಗ್ರಾಮ ಪಂಚಾಯತ್ ವತಿಯಿಂದ ಸಭಾಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಪೇರಾಲು ಗ್ರಾಮ ಪಂಚಾಯತ್ ಪ್ರಭಾರ ಪಿ. ಡಿ. ಓ ಗುರುಪ್ರಸಾದ್, ಸಹಶಿಕ್ಷಕಿ ರಾಜೇಶ್ವರಿ ಸುಂದರ ಕೇನಾಜೆ, ಪೋಲೀಸ್ ಅಧಿಕಾರಿ ಅನಿಲ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಬಗ್ಗೆ ಮಾಹಿತಿ ಮತ್ತು ಸೌಲಭ್ಯ, ಹಲವಾರು ಯೋಜನೆಗೆಳ ವಿವರಣೆಯನ್ನು ಪಿ. ಡಿ. ಓ. ತಿಳಿಸಿದರು ಮತ್ತು ಮಕ್ಕಳ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಿತು. ಪಂಚಾಯತ್ ಸಿಬ್ಬಂದಿ ವರ್ಗ ಶಾಲೆಯ ಸಹಶಿಕ್ಷಕ ವಸಂತ ಭಾಗವಹಿಸಿದ್ದರು.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…