ಎಲಿಮಲೆ: ವಿದ್ಯಾರ್ಥಿ ಪೋಲೀಸ್ ಕ್ಯಾಡೆಟ್ ಕಾರ್ಯಕ್ರಮದ ಅಂಗವಾಗಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿನ ವಿದ್ಯಾರ್ಥಿಗಳಿಂದ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೊಂದು ಭೇಟಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ್ ಪೇರಾಲು, ಸಹಶಿಕ್ಷಕರಾದ ರಾಜೇಶ್ವರಿ ಕೇನಾಜೆ, ಶಿಕ್ಷಕ ವಸಂತ, ಪೋಲೀಸ್ ಅಧಿಕಾರಿ ಅನಿಲ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಮ್ ಕಣೆಮರಡ್ಕ ಗ್ರಂಥಾಲಯದ ಮಾಹಿತಿ, ಪುಸ್ತಕ ನಿರ್ವಹಣೆ ಮತ್ತು ಓದುವಿಕೆಯ ಮಹತ್ವ ,ಗ್ರಂಥಾಲಯದ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ಮುಖ್ಯೋಪಾಧ್ಯಾಯರು ಮಾತನಾಡಿ ಗ್ರಂಥಾಲಯದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಗ್ರಾಮ ಪಂಚಾಯತ್ ವತಿಯಿಂದ ಸಭಾಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ , ಶಾಲಾ ಮುಖ್ಯೋಪಾಧ್ಯಾಯ ಚಂದ್ರಶೇಖರ ಪೇರಾಲು ಗ್ರಾಮ ಪಂಚಾಯತ್ ಪ್ರಭಾರ ಪಿ. ಡಿ. ಓ ಗುರುಪ್ರಸಾದ್, ಸಹಶಿಕ್ಷಕಿ ರಾಜೇಶ್ವರಿ ಸುಂದರ ಕೇನಾಜೆ, ಪೋಲೀಸ್ ಅಧಿಕಾರಿ ಅನಿಲ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಬಗ್ಗೆ ಮಾಹಿತಿ ಮತ್ತು ಸೌಲಭ್ಯ, ಹಲವಾರು ಯೋಜನೆಗೆಳ ವಿವರಣೆಯನ್ನು ಪಿ. ಡಿ. ಓ. ತಿಳಿಸಿದರು ಮತ್ತು ಮಕ್ಕಳ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಿತು. ಪಂಚಾಯತ್ ಸಿಬ್ಬಂದಿ ವರ್ಗ ಶಾಲೆಯ ಸಹಶಿಕ್ಷಕ ವಸಂತ ಭಾಗವಹಿಸಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…