ಸುಳ್ಯ: ನಿರಂತರ ಓದಿನಿಂದ ಮಾತ್ರ ಸಾಹಿತ್ಯ ರಚನೆ ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲ, ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಹೇಳಿದರು. ಸುಳ್ಯ ತಾಲೂಕು ಸಾಹಿತ್ಯ ಪರಿಷತ್ , ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಸರಕಾರಿ ಪ್ರೌಢ ಶಾಲೆ ಎಲಿಮಲೆ ಇದರ ಆಶ್ರಯದಲ್ಲಿ ನಡೆದ ‘ಸಾಧನಾ ಶೃಂಗ’ ಸಾಹಿತಿಗಳೊಡನೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ನಂದಗೋಕುಲ, ಸಾಹಿತಿ ಕೃ.ಶಾ ಮರ್ಕಂಜ, ಶರತ್ ಮರ್ಗಿಲಡ್ಕ ಪುರುಷೋತ್ತಮ ಕಜೆ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಬಳಿಕ ವಿಧ್ಯಾರ್ಥಿಗಳು ಸಾಹಿತಿಗಳೊಂದಿಗೆ ಸಂವಾದ ನಡೆಸಿದರು. ಕನ್ನಡ ರಾಜ್ಯೋತ್ಸವ ಸಲುವಾಗಿ ನಡೆಸಿದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಪೇರಾಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುರಳೀಧರ ಸಾಹಿತಿಗಳ ಪರಿಚಯ ಮಾಡಿದರು. ಸುಂದರ ವಂದಿಸಿ, ವಿರೂಪಾಕ್ಷಪ್ಪ ಕಾರ್ಯಕ್ರಮ ನಿರೂಪಿಸಿದರು.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…