ಸುಳ್ಯ: ನಿರಂತರ ಓದಿನಿಂದ ಮಾತ್ರ ಸಾಹಿತ್ಯ ರಚನೆ ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲ, ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಹೇಳಿದರು. ಸುಳ್ಯ ತಾಲೂಕು ಸಾಹಿತ್ಯ ಪರಿಷತ್ , ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಸರಕಾರಿ ಪ್ರೌಢ ಶಾಲೆ ಎಲಿಮಲೆ ಇದರ ಆಶ್ರಯದಲ್ಲಿ ನಡೆದ ‘ಸಾಧನಾ ಶೃಂಗ’ ಸಾಹಿತಿಗಳೊಡನೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ನಂದಗೋಕುಲ, ಸಾಹಿತಿ ಕೃ.ಶಾ ಮರ್ಕಂಜ, ಶರತ್ ಮರ್ಗಿಲಡ್ಕ ಪುರುಷೋತ್ತಮ ಕಜೆ ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಬಳಿಕ ವಿಧ್ಯಾರ್ಥಿಗಳು ಸಾಹಿತಿಗಳೊಂದಿಗೆ ಸಂವಾದ ನಡೆಸಿದರು. ಕನ್ನಡ ರಾಜ್ಯೋತ್ಸವ ಸಲುವಾಗಿ ನಡೆಸಿದ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಪೇರಾಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುರಳೀಧರ ಸಾಹಿತಿಗಳ ಪರಿಚಯ ಮಾಡಿದರು. ಸುಂದರ ವಂದಿಸಿ, ವಿರೂಪಾಕ್ಷಪ್ಪ ಕಾರ್ಯಕ್ರಮ ನಿರೂಪಿಸಿದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…