ಸುದ್ದಿಗಳು

ಎಲಿಮಲೆ ಸಾಹಿತ್ಯ ಸಮ್ಮೇಳನ : ಆಮಂತ್ರಣ ಪತ್ರಿಕೆ ಬಿಡುಗಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹಿರಿಯ ವಿದ್ಯಾರ್ಥಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎಲಿಮಲೆಯಲ್ಲಿ ಜ. 19ರಂದು ನಡೆಯಲಿರುವ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಜ.7ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

Advertisement
Advertisement

ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಎ.ವಿ. ತೀರ್ಥರಾಮ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ, ಈ ಊರಿನಲ್ಲಿ ಸಮ್ಮೇಳನ ಸಂಘಟಿಸುವ ಜವಾಬ್ದಾರಿ ನಮಗೆ ಬಂದಿದೆ. ಅದನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ, ನಿಕಟಪೂರ್ವಾಧ್ಯಕ್ಷೆ ಎಂ. ಮೀನಾಕ್ಷಿ ಗೌಡ ಮಾತನಾಡಿ ಶುಭಹಾರೈಸಿದರು.

ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಮೆತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಚಂದ್ರಶೇಖರ ಪೇರಾಲ್, ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಜಯಂತ ತಳೂರು, ಸ್ವಾಗತ ಸಮಿತಿ ಉಪಾಧ್ಯಕ್ಷರುಗಳಾದ ರಾಧಾಕೃಷ್ಣ ಕೆ.ಆರ್.ಮಾವಿನಕಟ್ಟೆ, ಕೃಷ್ಣಯ್ಯ ಮೂಲೆತೋಟ, ಜೊತೆ ಕಾರ್ಯದರ್ಶಿ ದಯಾನಂದ ಮೆತ್ತಡ್ಕ, ಉಪಸಮಿತಿ ಸಂಚಾಲಕರುಗಳಾದ ದುರ್ಗಾಕುಮಾರ್ ನಾಯರ್‌ಕೆರೆ, ಶರತ್ ಮರ್ಗಿಲಡ್ಕ, ಮುರಳೀಧರ ಪುನ್ಕುಟ್ಟಿ, ಗದಾಧರ ಬಾಳುಗೋಡು, ತಿರುಮಲೇಶ್ವರಿ ಯು.ಎಸ್., ಓಂಪ್ರಸಾದ್ ಕಜೆ, ಹರಿಪ್ರಸಾದ್ ಬಿ.ವಿ., ಪುರುಷೋತ್ತಮ ಸುಳ್ಳಿ, ರಮಾನಂದ ಹೊಸತೋಟ, ರಂಜಿತ್ ಅಂಬೆಕಲ್ಲು, ದೀಕ್ಷಿತ್ ಚಿತ್ತಡ್ಕ, ಭರತ್ ಪಾರೆಮಜಲು, ತಾರನಾಥ ಅಡಿಗೈ, ವಿಷ್ಣು ಗೌಡ ಅಂಬೆಕಲ್ಲು, ವಸಂತ ನಾಯಕ್, ಪುನೀತ್, ಅನ್ವಿತ್ ಕೇಪಳಕಜೆ ಮೊದಲಾದವರು ಉಪಸ್ಥಿತರಿದ್ದರು.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ  ಆತಂಕದ  ಭವಿಷ್ಯವನ್ನು ಎದುರಿಸುತ್ತಿರುವ…

42 minutes ago

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?

ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…

6 hours ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

7 hours ago

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

11 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

15 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

15 hours ago