ಸುಳ್ಯ: ಎಲಿಮಲೆಯಲ್ಲಿ ನಡೆಯುವ 24 ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಆಯ್ಕೆಯ ಬಗ್ಗೆ ಸಮಾಲೋಚನಾ ಸಭೆಯು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ಸಾಹಿತ್ಯ ಪರಿಷತ್ ಅಧ್ಯಕ್ಷ ಹರಪ್ರಸಾದ್ ತುದಿಯಡ್ಕ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಗ್ಗೆ ವಿವರಿಸಿದರು.ಎಲ್ಲರ ಸರ್ವಾನುಮತದ ನಿರ್ಣಯದಂತೆ ಹಿರಿಯ ಸಾಹಿತಿ- ಕವಿ ಕೃ.ಶಾ.ಮರ್ಕಂಜ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆರಿಸಲಾಯಿತು.
ಸಮ್ಮೇಳನಗಳ ಪೂರ್ವಾಧ್ಯಕ್ಷರಾದ ಕುತ್ಯಾಳ ನಾಗಪ್ಪ ಗೌಡ, ಡಾ.ಪ್ರಭಾಕರ ಶಿಶಿಲ, ಲಲಿತಾಜ ಮಲ್ಲಾರ, ಶೀಲಾವತಿ ಕೊಳಂಬೆ, ಜಿ.ಎಸ್.ಉಬರಡ್ಕ, ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾದ ಮೀನಾಕ್ಷಿ ಗೌಡ,ಎಲಿಮಲೆ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ರಾದ ಎ.ವಿ.ತೀರ್ಥರಾಮ,ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಮೆತ್ತಡ್ಕ ಹಾಗು ಸಮಿತಿಯ ಸದಸ್ಯರು, ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ದಯಾನಂದ ಆಳ್ವ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಚಂದ್ರಶೇಖರ್ ಪೇರಾಲು ಸ್ವಾಗತಿಸಿ, ತೇಜಸ್ವಿ ಕಡಪಳ ವಂದಿಸಿದರು.
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490