ಸುದ್ದಿಗಳು

ಎಲ್ಲರೂ ಕೈಜೋಡಿಸದೆ ನದಿಗಳ ಸಮಸ್ಯೆ ಬಗೆಹರಿಯದು- ಶ್ರೀಪಡ್ರೆ

Share

ಸುಳ್ಯ: ನದಿ ಯಾವತ್ತೂ ಒಬ್ಬರ ಸ್ವತ್ತಲ್ಲ. ಅದು ಸಮುದಾಯದ ಆಸ್ತಿ. ಸಾರ್ವಜನಿಕ ಸಹಭಾಗಿತ್ವದೊಂದಿಗೆ ನದಿಗಳ ಸ್ವಚ್ಛತೆಯ ಹಾಗೂ ನಿರಂತರ ಹರಿವಿನ ಬಗ್ಗೆ ಚಿಂತಿಸಬೇಕು. ನೀರು ಬತ್ತುವಿಕೆಗೆ ಸ್ವಾತಿ ಮಳೆ ಬಾರದಿರುವುದು ಒಂದು ಕಾರಣವಾದರೆ ನಾವು ಮಾಡುತ್ತಿರುವ ಅನೇಕ ತಪ್ಪುಗಳೂ ಕಾರಣವಾಗುತ್ತವೆ. ಮಹಾರಾಷ್ಟ್ರ ಹಾಗೂ ರಾಜಸ್ಥಾನಗಳಲ್ಲಿ ನೀರಿನ ಕೊರತೆ ಕಂಡಾಗ ಜನರೆಲ್ಲ ಒಗ್ಗೂಡಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಂಡ ಉದಾಹರಣೆಗಳಿವೆ. ನೀರು ಸಿಕ್ಕಿದರೆ ಎಲ್ಲವೂ ಸಿಕ್ಕಿದಂತೆ. ನೀರು ಬತ್ತಿದರೆ ಎಲ್ಲವೂ ಬತ್ತಿದಂತೆ ಎಂಬ ಮಾತಿದೆ.

Advertisement

ಪಯಸ್ವಿನಿಯಲ್ಲಿ ನೀರು ಸಂಪೂರ್ಣ ಮರೆಯಾಗುವ ಮೊದಲೇ ಜನಸಮುದಾಯವು ಅರ್ಥಮಾಡಿಕೊಂಡು ಮಳೆ ನೀರನ್ನು ಇಂಗಿಸಿಕೊಂಡು ಅಂತರ್ಜಲ ತುಂಬುವಂತೆ ಮಾಡಬೇಕು ಎಂದು ಖ್ಯಾತ ಜಲತಜ್ಞ ಶ್ರೀಪಡ್ರೆ ಹೇಳಿದರು. ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ “ಜೀವ ಜಲದ ಉಳಿವು: ಪಯಸ್ವಿನಿಯಲ್ಲಿ ನಿರಂತರ ನೀರಿನ ಹರಿವು” ಎಂಬ ಸಂವಾದ ಕಾರ್ಯಕ್ರಮದಲ್ಲಿ ಅವರು ವಿಷಯ ಮಂಡನೆ ಮಾಡಿದರು. ಈ ಕಾರ್ಯಕ್ರಮವನ್ನು ಶ್ರೀ ಸರಸ್ವತಿ ಚ್ಯಾರಿಟೆಬಲ್ ಟ್ರಸ್ಟ್ ಪುತ್ತೂರು ಇವರು ಪ್ರಾಯೋಜಿಸಿದ್ದರು.

ಸುಳ್ಯದ ಶಾಸಕ ಎಸ್. ಅಂಗಾರ ಮಾತನಾಡಿ ಅಲ್ಲಲ್ಲಿ ಕಿಂಡಿ ಅಣೆಕಟ್ಟುಗಳನ್ನು ಕಟ್ಟುವ ಯೋಜನೆ ಸರಕಾರದ ಮುಂದಿದೆ. ಪಯಸ್ವಿನಿ ನದಿಯ ಜಲಮೂಲದ ಸಮೃದ್ಧಿಯ ಕೆಲಸದಲ್ಲಿ ತನ್ನ ಸಹಕಾರ ನೀಡುವುದಾಗಿ ಹೇಳಿದರು. ನಗರ ಪಂಚಾಯತ್ ಸದಸ್ಯ ವಿನಯಕುಮಾರ್ ಕಂದಡ್ಕ ಹಾಗೂ ಡಾ. ವಿದ್ಯಾಶಾಂಭವ ಪಾರೆ ಅಭಿಪ್ರಾಯ ಮಂಡಿಸಿದರು.

ಆಶಿಕಾ ಪ್ರಾರ್ಥಿಸಿದರು. ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಎಲ್ಲರನ್ನೂ ಸ್ವಾಗತಿಸಿ ಪಯಸ್ವಿನಿಯ ಮೂಲ ಒರತೆಗಳನ್ನು ಬಲಪಡಿಸುವ ಅಗತ್ಯವನ್ನು ಮನಗಾಣಿಸಿದರು.

Advertisement

ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಿಪ್ರಸಾದ್ ಕೆ. ಇಂತಹ ಜಾಗೃತಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ಜನರು ತುರ್ತಾಗಿ ಅರ್ಥಮಾಡಿಕೊಳ್ಳಬೇಕು ಎಂದರು.
ಚರ್ಚೆಯಲ್ಲಿ ಪಯಸ್ವಿನಿ ಉತ್ಸವ ಸಮಿತಿಯ ಅಧ್ಯಕ್ಷ ಗಣೇಶ್ ಭಟ್, ರಾಘವೇಂದ್ರ ಮಠದ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ, ಕೃಷ್ಣವೇಣಿ ಮುಂತಾದವರು ಭಾಗವಹಿಸಿದರು.
ಕೊನೆಯಲ್ಲಿ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ ಬಿಪಿನ್ ಚಂದ್ರ ವಂದಿಸಿರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

3 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

4 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago