ಸುಳ್ಯ: ನದಿ ಯಾವತ್ತೂ ಒಬ್ಬರ ಸ್ವತ್ತಲ್ಲ. ಅದು ಸಮುದಾಯದ ಆಸ್ತಿ. ಸಾರ್ವಜನಿಕ ಸಹಭಾಗಿತ್ವದೊಂದಿಗೆ ನದಿಗಳ ಸ್ವಚ್ಛತೆಯ ಹಾಗೂ ನಿರಂತರ ಹರಿವಿನ ಬಗ್ಗೆ ಚಿಂತಿಸಬೇಕು. ನೀರು ಬತ್ತುವಿಕೆಗೆ ಸ್ವಾತಿ ಮಳೆ ಬಾರದಿರುವುದು ಒಂದು ಕಾರಣವಾದರೆ ನಾವು ಮಾಡುತ್ತಿರುವ ಅನೇಕ ತಪ್ಪುಗಳೂ ಕಾರಣವಾಗುತ್ತವೆ. ಮಹಾರಾಷ್ಟ್ರ ಹಾಗೂ ರಾಜಸ್ಥಾನಗಳಲ್ಲಿ ನೀರಿನ ಕೊರತೆ ಕಂಡಾಗ ಜನರೆಲ್ಲ ಒಗ್ಗೂಡಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಂಡ ಉದಾಹರಣೆಗಳಿವೆ. ನೀರು ಸಿಕ್ಕಿದರೆ ಎಲ್ಲವೂ ಸಿಕ್ಕಿದಂತೆ. ನೀರು ಬತ್ತಿದರೆ ಎಲ್ಲವೂ ಬತ್ತಿದಂತೆ ಎಂಬ ಮಾತಿದೆ.
ಪಯಸ್ವಿನಿಯಲ್ಲಿ ನೀರು ಸಂಪೂರ್ಣ ಮರೆಯಾಗುವ ಮೊದಲೇ ಜನಸಮುದಾಯವು ಅರ್ಥಮಾಡಿಕೊಂಡು ಮಳೆ ನೀರನ್ನು ಇಂಗಿಸಿಕೊಂಡು ಅಂತರ್ಜಲ ತುಂಬುವಂತೆ ಮಾಡಬೇಕು ಎಂದು ಖ್ಯಾತ ಜಲತಜ್ಞ ಶ್ರೀಪಡ್ರೆ ಹೇಳಿದರು. ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ “ಜೀವ ಜಲದ ಉಳಿವು: ಪಯಸ್ವಿನಿಯಲ್ಲಿ ನಿರಂತರ ನೀರಿನ ಹರಿವು” ಎಂಬ ಸಂವಾದ ಕಾರ್ಯಕ್ರಮದಲ್ಲಿ ಅವರು ವಿಷಯ ಮಂಡನೆ ಮಾಡಿದರು. ಈ ಕಾರ್ಯಕ್ರಮವನ್ನು ಶ್ರೀ ಸರಸ್ವತಿ ಚ್ಯಾರಿಟೆಬಲ್ ಟ್ರಸ್ಟ್ ಪುತ್ತೂರು ಇವರು ಪ್ರಾಯೋಜಿಸಿದ್ದರು.
ಸುಳ್ಯದ ಶಾಸಕ ಎಸ್. ಅಂಗಾರ ಮಾತನಾಡಿ ಅಲ್ಲಲ್ಲಿ ಕಿಂಡಿ ಅಣೆಕಟ್ಟುಗಳನ್ನು ಕಟ್ಟುವ ಯೋಜನೆ ಸರಕಾರದ ಮುಂದಿದೆ. ಪಯಸ್ವಿನಿ ನದಿಯ ಜಲಮೂಲದ ಸಮೃದ್ಧಿಯ ಕೆಲಸದಲ್ಲಿ ತನ್ನ ಸಹಕಾರ ನೀಡುವುದಾಗಿ ಹೇಳಿದರು. ನಗರ ಪಂಚಾಯತ್ ಸದಸ್ಯ ವಿನಯಕುಮಾರ್ ಕಂದಡ್ಕ ಹಾಗೂ ಡಾ. ವಿದ್ಯಾಶಾಂಭವ ಪಾರೆ ಅಭಿಪ್ರಾಯ ಮಂಡಿಸಿದರು.
ಆಶಿಕಾ ಪ್ರಾರ್ಥಿಸಿದರು. ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಎಲ್ಲರನ್ನೂ ಸ್ವಾಗತಿಸಿ ಪಯಸ್ವಿನಿಯ ಮೂಲ ಒರತೆಗಳನ್ನು ಬಲಪಡಿಸುವ ಅಗತ್ಯವನ್ನು ಮನಗಾಣಿಸಿದರು.
ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಿಪ್ರಸಾದ್ ಕೆ. ಇಂತಹ ಜಾಗೃತಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ಜನರು ತುರ್ತಾಗಿ ಅರ್ಥಮಾಡಿಕೊಳ್ಳಬೇಕು ಎಂದರು.
ಚರ್ಚೆಯಲ್ಲಿ ಪಯಸ್ವಿನಿ ಉತ್ಸವ ಸಮಿತಿಯ ಅಧ್ಯಕ್ಷ ಗಣೇಶ್ ಭಟ್, ರಾಘವೇಂದ್ರ ಮಠದ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ, ಕೃಷ್ಣವೇಣಿ ಮುಂತಾದವರು ಭಾಗವಹಿಸಿದರು.
ಕೊನೆಯಲ್ಲಿ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ ಬಿಪಿನ್ ಚಂದ್ರ ವಂದಿಸಿರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…