Advertisement
ಸುದ್ದಿಗಳು

ಎಲ್ಲರೂ ಕೈಜೋಡಿಸದೆ ನದಿಗಳ ಸಮಸ್ಯೆ ಬಗೆಹರಿಯದು- ಶ್ರೀಪಡ್ರೆ

Share

ಸುಳ್ಯ: ನದಿ ಯಾವತ್ತೂ ಒಬ್ಬರ ಸ್ವತ್ತಲ್ಲ. ಅದು ಸಮುದಾಯದ ಆಸ್ತಿ. ಸಾರ್ವಜನಿಕ ಸಹಭಾಗಿತ್ವದೊಂದಿಗೆ ನದಿಗಳ ಸ್ವಚ್ಛತೆಯ ಹಾಗೂ ನಿರಂತರ ಹರಿವಿನ ಬಗ್ಗೆ ಚಿಂತಿಸಬೇಕು. ನೀರು ಬತ್ತುವಿಕೆಗೆ ಸ್ವಾತಿ ಮಳೆ ಬಾರದಿರುವುದು ಒಂದು ಕಾರಣವಾದರೆ ನಾವು ಮಾಡುತ್ತಿರುವ ಅನೇಕ ತಪ್ಪುಗಳೂ ಕಾರಣವಾಗುತ್ತವೆ. ಮಹಾರಾಷ್ಟ್ರ ಹಾಗೂ ರಾಜಸ್ಥಾನಗಳಲ್ಲಿ ನೀರಿನ ಕೊರತೆ ಕಂಡಾಗ ಜನರೆಲ್ಲ ಒಗ್ಗೂಡಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಂಡ ಉದಾಹರಣೆಗಳಿವೆ. ನೀರು ಸಿಕ್ಕಿದರೆ ಎಲ್ಲವೂ ಸಿಕ್ಕಿದಂತೆ. ನೀರು ಬತ್ತಿದರೆ ಎಲ್ಲವೂ ಬತ್ತಿದಂತೆ ಎಂಬ ಮಾತಿದೆ.

ಪಯಸ್ವಿನಿಯಲ್ಲಿ ನೀರು ಸಂಪೂರ್ಣ ಮರೆಯಾಗುವ ಮೊದಲೇ ಜನಸಮುದಾಯವು ಅರ್ಥಮಾಡಿಕೊಂಡು ಮಳೆ ನೀರನ್ನು ಇಂಗಿಸಿಕೊಂಡು ಅಂತರ್ಜಲ ತುಂಬುವಂತೆ ಮಾಡಬೇಕು ಎಂದು ಖ್ಯಾತ ಜಲತಜ್ಞ ಶ್ರೀಪಡ್ರೆ ಹೇಳಿದರು. ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ “ಜೀವ ಜಲದ ಉಳಿವು: ಪಯಸ್ವಿನಿಯಲ್ಲಿ ನಿರಂತರ ನೀರಿನ ಹರಿವು” ಎಂಬ ಸಂವಾದ ಕಾರ್ಯಕ್ರಮದಲ್ಲಿ ಅವರು ವಿಷಯ ಮಂಡನೆ ಮಾಡಿದರು. ಈ ಕಾರ್ಯಕ್ರಮವನ್ನು ಶ್ರೀ ಸರಸ್ವತಿ ಚ್ಯಾರಿಟೆಬಲ್ ಟ್ರಸ್ಟ್ ಪುತ್ತೂರು ಇವರು ಪ್ರಾಯೋಜಿಸಿದ್ದರು.

ಸುಳ್ಯದ ಶಾಸಕ ಎಸ್. ಅಂಗಾರ ಮಾತನಾಡಿ ಅಲ್ಲಲ್ಲಿ ಕಿಂಡಿ ಅಣೆಕಟ್ಟುಗಳನ್ನು ಕಟ್ಟುವ ಯೋಜನೆ ಸರಕಾರದ ಮುಂದಿದೆ. ಪಯಸ್ವಿನಿ ನದಿಯ ಜಲಮೂಲದ ಸಮೃದ್ಧಿಯ ಕೆಲಸದಲ್ಲಿ ತನ್ನ ಸಹಕಾರ ನೀಡುವುದಾಗಿ ಹೇಳಿದರು. ನಗರ ಪಂಚಾಯತ್ ಸದಸ್ಯ ವಿನಯಕುಮಾರ್ ಕಂದಡ್ಕ ಹಾಗೂ ಡಾ. ವಿದ್ಯಾಶಾಂಭವ ಪಾರೆ ಅಭಿಪ್ರಾಯ ಮಂಡಿಸಿದರು.

ಆಶಿಕಾ ಪ್ರಾರ್ಥಿಸಿದರು. ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಎಲ್ಲರನ್ನೂ ಸ್ವಾಗತಿಸಿ ಪಯಸ್ವಿನಿಯ ಮೂಲ ಒರತೆಗಳನ್ನು ಬಲಪಡಿಸುವ ಅಗತ್ಯವನ್ನು ಮನಗಾಣಿಸಿದರು.

ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಿಪ್ರಸಾದ್ ಕೆ. ಇಂತಹ ಜಾಗೃತಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ಜನರು ತುರ್ತಾಗಿ ಅರ್ಥಮಾಡಿಕೊಳ್ಳಬೇಕು ಎಂದರು.
ಚರ್ಚೆಯಲ್ಲಿ ಪಯಸ್ವಿನಿ ಉತ್ಸವ ಸಮಿತಿಯ ಅಧ್ಯಕ್ಷ ಗಣೇಶ್ ಭಟ್, ರಾಘವೇಂದ್ರ ಮಠದ ಅಧ್ಯಕ್ಷ ಶ್ರೀಕೃಷ್ಣ ಸೋಮಯಾಗಿ, ಕೃಷ್ಣವೇಣಿ ಮುಂತಾದವರು ಭಾಗವಹಿಸಿದರು.
ಕೊನೆಯಲ್ಲಿ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ ಬಿಪಿನ್ ಚಂದ್ರ ವಂದಿಸಿರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

2 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

3 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

4 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

16 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

19 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

1 day ago