Advertisement
ಸುದ್ದಿಗಳು

ಮಂಡೆಕೋಲು ಅಪರಾಧ ಮುಕ್ತ ಗ್ರಾಮಕ್ಕೆ ಸಂಕಲ್ಪ : ‘ಗ್ರಾಮ ಸ್ವರಾಜ್ಯದೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಅಂಗಾರ

Share

ಸುಳ್ಯ:ಪ್ರತಿಯೊಬ್ಬರೂ ಅಪರಾಧಗಳಿಂದ ದೂರವಿದ್ದು ದುಶ್ಚಟಗಳಿಂದ ಮುಕ್ತರಾದರೆ ಅಂತಹ ನಾಡು ಆದರ್ಶವಾಗಿರಲು ಸಾಧ್ಯ. ಆದುದರಿಂದ ಆದರ್ಶ ಗ್ರಾಮವಾಗಲು ಪ್ರತಿಯೊಬ್ಬರೂ ಕೈ ಜೋಡಿಸುವ ಅಗತ್ಯವಿದೆ ಎಂದು ಶಾಸಕ ಎಸ್. ಅಂಗಾರ ಹೇಳಿದ್ದಾರೆ.

Advertisement
Advertisement
Advertisement
Advertisement

ಮಂಡೆಕೋಲು ಗ್ರಾಮ ಪಂಚಾಯತ್, ಗ್ರಾಮ ವಿಕಾಸ ಸಮಿತಿ ಮತ್ತು ಅಪರಾಧ ಮುಕ್ತ ಗ್ರಾಮ ಜನಾಂದೋಲನ ಸಮಿತಿಯ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನವೋದಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸಹಯೋಗದಲ್ಲಿ ಮಂಡೆಕೋಲನ್ನು ಆದರ್ಶ ಗ್ರಾಮವಾಗಿಸುವ ಸಂಕಲ್ಪ ‘ಗ್ರಾಮ ಸ್ವರಾಜ್ಯದೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಹಿಂದೆ ಅಪರಾಧ ಮುಕ್ತ ಗ್ರಾಮ ಎಂಬ ಆಂದೋಲನ ನಡೆಸಿರುವುದು ಮತ್ತು ಈಗ ಗ್ರಾಮಸ್ಥರೇ ಸೇರಿ ಆದರ್ಶ ಗ್ರಾಮವನ್ನು ರೂಪಿಸಲು ಮುಂದಾಗಿರುವುದು ಅತ್ಯಂತ ಧನಾತ್ಮಕ ಮತ್ತು ಶ್ರೇಷ್ಠ ಚಿಂತನೆ. ಇದಕ್ಕೆ ಎಲ್ಲಾ ರೀತಿಯ ಬೆಂಬಲವನ್ನೂ ನೀಡುತ್ತೇನೆ. ಗ್ರಾಮದ ಮೂಲಭೂತ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂದು ಅವರು ಹೇಳಿದರು.

Advertisement

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಮುಖ್ಯ ಅತಿಥಿಯಾಗಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಬಿ. ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಾನಕಿ ಕಣೆಮರಡ್ಕ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಪ್ರೇರಕಿ ಸಂಧ್ಯಾ ಮಾವಂಜಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸರೋಜಿನಿ ಮಾವಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯೆ ವಿನುತಾ ಪಾತಿಕಲ್ಲು ಸ್ವಾಗತಿಸಿ, ಅಪರಾಧ ಮುಕ್ತ ಗ್ರಾಮ ಜನಾಂದೋಲನ ಸಮಿತಿ ಸಂಚಾಲಕ ಸುರೇಶ್ ಕಣೆಮರಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ವಿಕಾಸ ಸಮಿತಿ ಸಂಚಾಲಕ ಜಯರಾಜ್ ಕುಕ್ಕೆಟ್ಟಿ ವಂದಿಸಿದರು. ಶ್ರೀಕಾಂತ್ ಮವಂಜಿ ಮತ್ತು ಬಾಲಕೃಷ್ಣ ಮಾವಂಜಿ ಕಾರ್ಯಕ್ರಮ ನಿರೂಪಿಸಿದರು.

 

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

18 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago