Advertisement
ಸುದ್ದಿಗಳು

ಮಂಡೆಕೋಲು ಅಪರಾಧ ಮುಕ್ತ ಗ್ರಾಮಕ್ಕೆ ಸಂಕಲ್ಪ : ‘ಗ್ರಾಮ ಸ್ವರಾಜ್ಯದೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಅಂಗಾರ

Share

ಸುಳ್ಯ:ಪ್ರತಿಯೊಬ್ಬರೂ ಅಪರಾಧಗಳಿಂದ ದೂರವಿದ್ದು ದುಶ್ಚಟಗಳಿಂದ ಮುಕ್ತರಾದರೆ ಅಂತಹ ನಾಡು ಆದರ್ಶವಾಗಿರಲು ಸಾಧ್ಯ. ಆದುದರಿಂದ ಆದರ್ಶ ಗ್ರಾಮವಾಗಲು ಪ್ರತಿಯೊಬ್ಬರೂ ಕೈ ಜೋಡಿಸುವ ಅಗತ್ಯವಿದೆ ಎಂದು ಶಾಸಕ ಎಸ್. ಅಂಗಾರ ಹೇಳಿದ್ದಾರೆ.

ಮಂಡೆಕೋಲು ಗ್ರಾಮ ಪಂಚಾಯತ್, ಗ್ರಾಮ ವಿಕಾಸ ಸಮಿತಿ ಮತ್ತು ಅಪರಾಧ ಮುಕ್ತ ಗ್ರಾಮ ಜನಾಂದೋಲನ ಸಮಿತಿಯ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನವೋದಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಸಹಯೋಗದಲ್ಲಿ ಮಂಡೆಕೋಲನ್ನು ಆದರ್ಶ ಗ್ರಾಮವಾಗಿಸುವ ಸಂಕಲ್ಪ ‘ಗ್ರಾಮ ಸ್ವರಾಜ್ಯದೆಡೆಗೆ ನಮ್ಮ ನಡಿಗೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಹಿಂದೆ ಅಪರಾಧ ಮುಕ್ತ ಗ್ರಾಮ ಎಂಬ ಆಂದೋಲನ ನಡೆಸಿರುವುದು ಮತ್ತು ಈಗ ಗ್ರಾಮಸ್ಥರೇ ಸೇರಿ ಆದರ್ಶ ಗ್ರಾಮವನ್ನು ರೂಪಿಸಲು ಮುಂದಾಗಿರುವುದು ಅತ್ಯಂತ ಧನಾತ್ಮಕ ಮತ್ತು ಶ್ರೇಷ್ಠ ಚಿಂತನೆ. ಇದಕ್ಕೆ ಎಲ್ಲಾ ರೀತಿಯ ಬೆಂಬಲವನ್ನೂ ನೀಡುತ್ತೇನೆ. ಗ್ರಾಮದ ಮೂಲಭೂತ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ ಎಂದು ಅವರು ಹೇಳಿದರು.

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಮುಖ್ಯ ಅತಿಥಿಯಾಗಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಬಿ. ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಾನಕಿ ಕಣೆಮರಡ್ಕ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಪ್ರೇರಕಿ ಸಂಧ್ಯಾ ಮಾವಂಜಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸರೋಜಿನಿ ಮಾವಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಡೆಕೋಲು ಗ್ರಾಮ ಪಂಚಾಯತ್ ಸದಸ್ಯೆ ವಿನುತಾ ಪಾತಿಕಲ್ಲು ಸ್ವಾಗತಿಸಿ, ಅಪರಾಧ ಮುಕ್ತ ಗ್ರಾಮ ಜನಾಂದೋಲನ ಸಮಿತಿ ಸಂಚಾಲಕ ಸುರೇಶ್ ಕಣೆಮರಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ವಿಕಾಸ ಸಮಿತಿ ಸಂಚಾಲಕ ಜಯರಾಜ್ ಕುಕ್ಕೆಟ್ಟಿ ವಂದಿಸಿದರು. ಶ್ರೀಕಾಂತ್ ಮವಂಜಿ ಮತ್ತು ಬಾಲಕೃಷ್ಣ ಮಾವಂಜಿ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

27 minutes ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

4 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

23 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago