Advertisement
ಧಾರ್ಮಿಕ

ಎಲ್ಲವೂ ನಿನ್ನದು ಎಂಬ ಭಾವ ಇರಲಿ : ರಾಘವೇಶ್ವರ ಶ್ರೀ

Share

 ಧಾರಾ ರಾಮಾಯಾಣ ಕಾರಣ -ಸ್ಮರಣ ಕಾರ್ಯಕ್ರಮ

Advertisement

ಬೆಂಗಳೂರು: ಯಾವಾಗಲೂ ನನ್ನದು ಎಂಬ ಭಾವ ಬರಬಾರದು ಎಲ್ಲವೂ ನಿನ್ನದು ಎಂಬುದು ಬರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ  ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ಅಭಿಪ್ರಾಯಪಟ್ಟರು.

ಗಿರಿನಗರ ಶ್ರೀರಾಮಾಶ್ರಮದ ಪುನರ್ವಸುಭವನದಲ್ಲಿ ಭಾನುವಾರ ನಡೆದ ಧಾರಾ-ರಾಮಾಯಣ ಕಾರಣ-ಸ್ಮರಣ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ನನ್ನ ನಿನ್ನ(ದೇವರ) ಮಧ್ಯೆ ಭೇದವಿಲ್ಲವಾಗಿಯೂ ಕೂಡ ಪ್ರಭು ನಾನು ನಿನ್ನವನು ಎನ್ನುವಾಗ ತುಂಬ ಸಮರ್ಪಣಾ ಭಾವ ಇದೆ ಹೊರತು ನೀನು ನನ್ನವನು ಎನ್ನುವಾಗ ನೀನು ನನ್ನವನು ಮಾತ್ರ ಎಂಬುದು ಬಂದಾಗ ಎಲ್ಲ ತಂಟೆ, ತಕರಾರುಗಳು ಶುರುವಾಗುತ್ತದೆ. ಸಮುದ್ರ ಮತ್ತು ಅಲೆ ಬೇರೆಯಾಗಿ ಕಂಡರೂ ಬೇರೆ ಅಲ್ಲ. ಆ ಅಲೆಯು ಅದೇ ಸಮುದ್ರದಿಂದ ತನ್ನ ವಿಲಾಸವನ್ನು ತೋರಿದೆ ಅದರಲ್ಲೇ ಒಂದಾಗಿದೆ. ಹಾಗೇ ನಾವು ಕೂಡ ರಾಮನು ಸಮುದ್ರವಾದರೆ ನಾವು ಎಲ್ಲ ಅಲೆಗಳು. ಅಲೆಯ ಮೂಲ ಸಮುದ್ರ ನಮ್ಮ ಮೂಲ ರಾಮಸಾಗರವಾಗಿದೆ ಎಂದು ಹೇಳಿದರು.

ರಾಮಾಯಣ ಇಲ್ಲದೇ ಭಾರತೀಯ ಸಂಸ್ಕೃತಿ ಇಲ್ಲ. ಮೂಲ ವಾಲ್ಮೀಕಿಯವರ ರಾಮಾಯಣವು ಎಲ್ಲಿಯೂ ಪಠ್ಯವಾಗಿಲ್ಲ. ಈಗಿನ ಪಠ್ಯಗಳಲ್ಲಿ ಅಲ್ಲಿಂದ ಇಲ್ಲಿಂದ ಸೇರಿ ತುಣುಕುಗಳ ರಾಮಾಯಣಗಳು ಸೇರಿವೆ. ನಮಗೆಲ್ಲ ಯಕ್ಷಗಾನ ಸೇರಿದಂತೆ ಮುಂತಾದ ಗ್ರಾಮ್ಯಕಲೆಗಳಿಂದ ನಮಗೆ ರಾಮಾಯಣಗಳು ತಿಳಿದು ಬಂದಿದೆ. ಇತ್ತೀಚೆಗೆ ಹೇಗೆ ಆಗಿದೆ ಎಂದರೆ ಮೂಲ ರಾಮಾಯಣವನ್ನು ಬಿಟ್ಟು ರಾಮಾಯಣದ ಗ್ರಂಥ ರಚನೆ ಮಾಡಿ ನಿನ್ನ ಕಥೆ ಬೇರೆ ಮಾಡು ಎಂಬಂತಾಗಿದೆ. ಕೆಲವು ಗ್ರಂಥಗಳಲ್ಲಿ ತತ್ವ, ಪಾತ್ರಗಳಿಗೆ ಅಪಚಾರವಾಗಿದೆ. ಕೆಲವು ಕಡೆ ಸೊಗಸು,ಸಂದೇಶ ಬಂದಿರುವ ಸಾಧ್ಯತೆಯೂ ಇದೆ. ಮೂಲ ರಾಮಾಯಣಕ್ಕೆ ಯಾವ ವಿಷಯ ವಿರೋಧವಾಗಿದೆಯೋ ಅದನ್ನು ಒಪ್ಪುವುದಕ್ಕೆ ಆಗುವುದಿಲ್ಲ. ಅಂತಹದ್ದನ್ನು ಕೈ ಬಿಡಬೇಕಾಗುತ್ತದೆ ಅದನ್ನು ಒಪ್ಪಲು ಸಾಧ್ಯವಿಲ್ಲ. ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ವಾಲ್ಮೀಕಿ ರಾಮಾಯಣವೂ ಅನಿವಾರ್ಯ ಪಠ್ಯವಾಗಿರಲಿದ್ದು ಇದರಿಂದ ಇಡೀ ಸಂಸ್ಕೃತಿ, ಜೀವನವೂ ಗೊತ್ತಾಗುತ್ತದೆ ಎಂದು ತಿಳಿಸಿದರು.

ಅಜ್ಞಾತ ರಾಮಾಯಣ ಎಂಬ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ವಿದ್ವಾನ್ ಜಗದೀಶ ಶರ್ಮಾ ಸಂಪ, ವಿದ್ವಾನ್ ಪಾದೇಕಲ್ಲು ವಿಷ್ಣುಭಟ್, ವಿದ್ವಾನ್ ರಾಘವೇಂದ್ರ ಭಟ್ ಕ್ಯಾದಗಿ, ಮೋಹನ ಭಾಸ್ಕರ ಹೆಗಡೆ ಭಾಗಿಯಾಗಿ ಕೇಳಿದ ರಾಮಾಯಣದ ಬಗೆಗಿನ ಪ್ರಶ್ನೆಗಳಿಗೆ ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿಯವರು ಉತ್ತರಿಸಿದರು.

ಸ್ಮರಣ ಕಾರ್ಯಕ್ರಮದಲ್ಲಿ ಧಾರಾ ರಾಮಾಯಣ ಪ್ರವಚನ ಆಲಿಸಿದ ರಾಘವೇಂದ್ರ ಭಟ್ ಕ್ಯಾದಗಿ, ಶಾರದಾ ಜಯಗೋವಿಂದ, ರಮ್ಯಾ, ನೀರ್ನಳ್ಳಿಗಣಪತಿ ಭಟ್, ಗೋವಿಂದರಾಜ್ ಕೋರಿಕ್ಕಾರ್ ತಮ್ಮ ಅನುಭವ ಕಥನವನ್ನು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

7 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

7 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

7 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

19 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago