ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 26ರಂದು ವಿಪರೀತ ಮಳೆ ಹಾಗೂ ಭಾರಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳಿಗೆ ಅಕ್ಟೋಬರ್ 26ರಂದು ರಜೆಯನ್ನು (ಉಡುಪಿ ಜಿಲ್ಲಾಧಿಕಾರಿಯವರ ಅಧಿಕೃತ ಜ್ಞಾಪನ ಸಂಖ್ಯೆ ಸಿಎಎಲ್ಸಿಆರ್144/2019-20/45213 ಅಕ್ಟೋಬರ್ 25) ಘೋಷಿಸಲಾಗಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ಎಲ್ಲಾ ಪದವಿ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.
ಅಲ್ಲದೆ ನವೆಂಬರ್ 12ರಂದು ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿರುವುದರಿಂದ ನವೆಂಬರ್ 11 ಮತ್ತು 12 ರಂದು ಎಲ್ಲಾ ಪದವಿ ಹಾಗೂ 13 ರಂದು (ಬಿ.ಬಿ.ಎ/ಬಿ.ಬಿ.ಎಂ) ನಿಗದಿಪಡಿಸಿದ್ದ ಪರೀಕ್ಷೆಗಳ ದಿನಾಂಕ ಬದಲಾವಣೆ ಮಾಡಿ ಮರುನಿಗದಿಪಡಿಸಲಾಗಿದೆ. ಉಳಿದಂತೆ ಪರೀಕ್ಷಾ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…