ಎಲ್ ಐ ಸಿ ಹಣ ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯ

September 3, 2019
8:24 PM

ಸುಳ್ಯ: ಭಾರತೀಯ ಜೀವ ವಿಮಾ ನಿಗಮದ ಸುಳ್ಯ ಉಪಗ್ರಹ ಶಾಖೆಯಲ್ಲಿ ನಿಗಮದ ಸಂಸ್ಥಾಪನಾ ದಿನಾಚರಣೆ ಮಂಗಳವಾರ ನಡೆಯಿತು.

Advertisement
Advertisement
Advertisement
Advertisement
Advertisement

ಮೊದಲ ಗ್ರಾಹಕ ರಾಜೇಂದ್ರಪ್ರಸಾದ್ ಮೂಡಿತ್ತಾಯ ಅವರು ಕಾರ್ಯಕ್ರಮ ಉದ್ಘಾಟಿಸಿ, ನಿಗಮವು ಗ್ರಾಹಕರ ಆಶೋತ್ತರಗಳಿಗೆ ಸ್ಪಂದಿಸಿ ಬಾಳಿಗೆ ಬೆಳಕು ನೀಡುತ್ತಿದೆ. ಇಲ್ಲಿ ತೊಡಗಿಸಿದ ಪ್ರತಿಯೊಬ್ಬರ ಹಣವೂ ಭದ್ರವಾಗಿದ್ದು ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯವೆಂದರು.

Advertisement

ಶಾಖಾಧಿಕಾರಿ ಜಿ. ಶಶಿಧರ ಹೆಗ್ಡೆ ಅವರು ನಿಗಮದ ಬಗ್ಗೆ ಮಾಹಿತಿ ನೀಡಿ 63 ಸಂವತ್ಸರಗಳನ್ನು ಪೂರೈಸಿ ಸಂಸ್ಥೆ ಮುನ್ನಡೆಯುತ್ತಿದ್ದು, ಹಲವು ಮೈಲುಗಲ್ಲುಗಳನ್ನು ಸ್ಥಾಪಿಸಿ ದೇಶದ ನವರತ್ನ ಸಂಸ್ಥೆಗಳಲ್ಲಿಯೇ ಮಹಾರತ್ನ ಸಂಸ್ಥೆಯಾಗಿ ದೇಶದ ಅಭಿವೃದ್ಧಿಗೆ ಅನುಪಮ ಕೊಡುಗೆ ನೀಡುತ್ತಿದೆ. 13ನೇ ಪಂಚವಾರ್ಷಿಕ ಯೋಜನೆಯಲ್ಲಿ ಈಗಾಗಲೇ 7,01,483 ಕೋಟಿ ರೂಪಾಯಿಗಳನ್ನು ಗಮನಾರ್ಹ ಹೂಡಿಕೆ ಮಾಡಿದೆ. ಗ್ರಾಹಕರ ಬೇಡಿಕೆಗನುಸಾರ ವಿವಿಧ ರೀತಿಯ ಸೌಲಭ್ಯಗಳನ್ನೊಳಗೊಂಡ ವಿವಿಧ ವಿಮಾ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದೆ ಎಂದರು.

ಅಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ ಮತ್ತು ಪ್ರತಿನಿಧಿ ಪ್ರಭಾಕರ ಎಸ್.ಎನ್. ಮಾತನಾಡಿದರು. ಉಪ ಆಡಳಿತಾಧಿಕಾರಿ ಲಿಂಗಪ್ಪ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯಕ್ ವಂದಿಸಿದರು. ಪ್ರತಿನಿಧಿ ಬಿ.ಪದ್ಮನಾಭ ಶೆಟ್ಟಿ ನಿರೂಪಿಸಿದರು.

Advertisement

ಆಡಳಿತಾಧಿಕಾರಿ ಮಹಾಲಿಂಗ ನಾಯ್ಕ ,ಪ್ರತಿನಿಧಿಗಳಾದ ಮಾಧವ ಕೆ. ಜಾಲ್ಸೂರು ಮತ್ತು ಸೋಮನಾಥ ಕೇರ್ಪಳ, ಕಚೇರಿ ಸಹಾಯಕರಾದ ಸಂದೀಪ್ ಮತ್ತು ರಾಜೇಶ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ
March 6, 2025
11:05 PM
by: The Rural Mirror
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ
March 6, 2025
10:58 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |
March 6, 2025
10:53 PM
by: ದ ರೂರಲ್ ಮಿರರ್.ಕಾಂ
ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
March 6, 2025
10:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror