ಸುಳ್ಯ: ಭಾರತೀಯ ಜೀವ ವಿಮಾ ನಿಗಮದ ಸುಳ್ಯ ಉಪಗ್ರಹ ಶಾಖೆಯಲ್ಲಿ ನಿಗಮದ ಸಂಸ್ಥಾಪನಾ ದಿನಾಚರಣೆ ಮಂಗಳವಾರ ನಡೆಯಿತು.
ಮೊದಲ ಗ್ರಾಹಕ ರಾಜೇಂದ್ರಪ್ರಸಾದ್ ಮೂಡಿತ್ತಾಯ ಅವರು ಕಾರ್ಯಕ್ರಮ ಉದ್ಘಾಟಿಸಿ, ನಿಗಮವು ಗ್ರಾಹಕರ ಆಶೋತ್ತರಗಳಿಗೆ ಸ್ಪಂದಿಸಿ ಬಾಳಿಗೆ ಬೆಳಕು ನೀಡುತ್ತಿದೆ. ಇಲ್ಲಿ ತೊಡಗಿಸಿದ ಪ್ರತಿಯೊಬ್ಬರ ಹಣವೂ ಭದ್ರವಾಗಿದ್ದು ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯವೆಂದರು.
ಶಾಖಾಧಿಕಾರಿ ಜಿ. ಶಶಿಧರ ಹೆಗ್ಡೆ ಅವರು ನಿಗಮದ ಬಗ್ಗೆ ಮಾಹಿತಿ ನೀಡಿ 63 ಸಂವತ್ಸರಗಳನ್ನು ಪೂರೈಸಿ ಸಂಸ್ಥೆ ಮುನ್ನಡೆಯುತ್ತಿದ್ದು, ಹಲವು ಮೈಲುಗಲ್ಲುಗಳನ್ನು ಸ್ಥಾಪಿಸಿ ದೇಶದ ನವರತ್ನ ಸಂಸ್ಥೆಗಳಲ್ಲಿಯೇ ಮಹಾರತ್ನ ಸಂಸ್ಥೆಯಾಗಿ ದೇಶದ ಅಭಿವೃದ್ಧಿಗೆ ಅನುಪಮ ಕೊಡುಗೆ ನೀಡುತ್ತಿದೆ. 13ನೇ ಪಂಚವಾರ್ಷಿಕ ಯೋಜನೆಯಲ್ಲಿ ಈಗಾಗಲೇ 7,01,483 ಕೋಟಿ ರೂಪಾಯಿಗಳನ್ನು ಗಮನಾರ್ಹ ಹೂಡಿಕೆ ಮಾಡಿದೆ. ಗ್ರಾಹಕರ ಬೇಡಿಕೆಗನುಸಾರ ವಿವಿಧ ರೀತಿಯ ಸೌಲಭ್ಯಗಳನ್ನೊಳಗೊಂಡ ವಿವಿಧ ವಿಮಾ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದೆ ಎಂದರು.
ಅಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ ಮತ್ತು ಪ್ರತಿನಿಧಿ ಪ್ರಭಾಕರ ಎಸ್.ಎನ್. ಮಾತನಾಡಿದರು. ಉಪ ಆಡಳಿತಾಧಿಕಾರಿ ಲಿಂಗಪ್ಪ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯಕ್ ವಂದಿಸಿದರು. ಪ್ರತಿನಿಧಿ ಬಿ.ಪದ್ಮನಾಭ ಶೆಟ್ಟಿ ನಿರೂಪಿಸಿದರು.
ಆಡಳಿತಾಧಿಕಾರಿ ಮಹಾಲಿಂಗ ನಾಯ್ಕ ,ಪ್ರತಿನಿಧಿಗಳಾದ ಮಾಧವ ಕೆ. ಜಾಲ್ಸೂರು ಮತ್ತು ಸೋಮನಾಥ ಕೇರ್ಪಳ, ಕಚೇರಿ ಸಹಾಯಕರಾದ ಸಂದೀಪ್ ಮತ್ತು ರಾಜೇಶ್ ಉಪಸ್ಥಿತರಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…