Advertisement
ಸುದ್ದಿಗಳು

ಎಲ್ ಐ ಸಿ ಹಣ ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯ

Share

ಸುಳ್ಯ: ಭಾರತೀಯ ಜೀವ ವಿಮಾ ನಿಗಮದ ಸುಳ್ಯ ಉಪಗ್ರಹ ಶಾಖೆಯಲ್ಲಿ ನಿಗಮದ ಸಂಸ್ಥಾಪನಾ ದಿನಾಚರಣೆ ಮಂಗಳವಾರ ನಡೆಯಿತು.

Advertisement
Advertisement

ಮೊದಲ ಗ್ರಾಹಕ ರಾಜೇಂದ್ರಪ್ರಸಾದ್ ಮೂಡಿತ್ತಾಯ ಅವರು ಕಾರ್ಯಕ್ರಮ ಉದ್ಘಾಟಿಸಿ, ನಿಗಮವು ಗ್ರಾಹಕರ ಆಶೋತ್ತರಗಳಿಗೆ ಸ್ಪಂದಿಸಿ ಬಾಳಿಗೆ ಬೆಳಕು ನೀಡುತ್ತಿದೆ. ಇಲ್ಲಿ ತೊಡಗಿಸಿದ ಪ್ರತಿಯೊಬ್ಬರ ಹಣವೂ ಭದ್ರವಾಗಿದ್ದು ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯವೆಂದರು.

ಶಾಖಾಧಿಕಾರಿ ಜಿ. ಶಶಿಧರ ಹೆಗ್ಡೆ ಅವರು ನಿಗಮದ ಬಗ್ಗೆ ಮಾಹಿತಿ ನೀಡಿ 63 ಸಂವತ್ಸರಗಳನ್ನು ಪೂರೈಸಿ ಸಂಸ್ಥೆ ಮುನ್ನಡೆಯುತ್ತಿದ್ದು, ಹಲವು ಮೈಲುಗಲ್ಲುಗಳನ್ನು ಸ್ಥಾಪಿಸಿ ದೇಶದ ನವರತ್ನ ಸಂಸ್ಥೆಗಳಲ್ಲಿಯೇ ಮಹಾರತ್ನ ಸಂಸ್ಥೆಯಾಗಿ ದೇಶದ ಅಭಿವೃದ್ಧಿಗೆ ಅನುಪಮ ಕೊಡುಗೆ ನೀಡುತ್ತಿದೆ. 13ನೇ ಪಂಚವಾರ್ಷಿಕ ಯೋಜನೆಯಲ್ಲಿ ಈಗಾಗಲೇ 7,01,483 ಕೋಟಿ ರೂಪಾಯಿಗಳನ್ನು ಗಮನಾರ್ಹ ಹೂಡಿಕೆ ಮಾಡಿದೆ. ಗ್ರಾಹಕರ ಬೇಡಿಕೆಗನುಸಾರ ವಿವಿಧ ರೀತಿಯ ಸೌಲಭ್ಯಗಳನ್ನೊಳಗೊಂಡ ವಿವಿಧ ವಿಮಾ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದೆ ಎಂದರು.

ಅಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ ಮತ್ತು ಪ್ರತಿನಿಧಿ ಪ್ರಭಾಕರ ಎಸ್.ಎನ್. ಮಾತನಾಡಿದರು. ಉಪ ಆಡಳಿತಾಧಿಕಾರಿ ಲಿಂಗಪ್ಪ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯಕ್ ವಂದಿಸಿದರು. ಪ್ರತಿನಿಧಿ ಬಿ.ಪದ್ಮನಾಭ ಶೆಟ್ಟಿ ನಿರೂಪಿಸಿದರು.

ಆಡಳಿತಾಧಿಕಾರಿ ಮಹಾಲಿಂಗ ನಾಯ್ಕ ,ಪ್ರತಿನಿಧಿಗಳಾದ ಮಾಧವ ಕೆ. ಜಾಲ್ಸೂರು ಮತ್ತು ಸೋಮನಾಥ ಕೇರ್ಪಳ, ಕಚೇರಿ ಸಹಾಯಕರಾದ ಸಂದೀಪ್ ಮತ್ತು ರಾಜೇಶ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

1 hour ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

1 hour ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

2 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

2 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

2 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

2 hours ago