ಸುಳ್ಯ: ಭಾರತೀಯ ಜೀವ ವಿಮಾ ನಿಗಮದ ಸುಳ್ಯ ಉಪಗ್ರಹ ಶಾಖೆಯಲ್ಲಿ ನಿಗಮದ ಸಂಸ್ಥಾಪನಾ ದಿನಾಚರಣೆ ಮಂಗಳವಾರ ನಡೆಯಿತು.
ಮೊದಲ ಗ್ರಾಹಕ ರಾಜೇಂದ್ರಪ್ರಸಾದ್ ಮೂಡಿತ್ತಾಯ ಅವರು ಕಾರ್ಯಕ್ರಮ ಉದ್ಘಾಟಿಸಿ, ನಿಗಮವು ಗ್ರಾಹಕರ ಆಶೋತ್ತರಗಳಿಗೆ ಸ್ಪಂದಿಸಿ ಬಾಳಿಗೆ ಬೆಳಕು ನೀಡುತ್ತಿದೆ. ಇಲ್ಲಿ ತೊಡಗಿಸಿದ ಪ್ರತಿಯೊಬ್ಬರ ಹಣವೂ ಭದ್ರವಾಗಿದ್ದು ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯವೆಂದರು.
ಶಾಖಾಧಿಕಾರಿ ಜಿ. ಶಶಿಧರ ಹೆಗ್ಡೆ ಅವರು ನಿಗಮದ ಬಗ್ಗೆ ಮಾಹಿತಿ ನೀಡಿ 63 ಸಂವತ್ಸರಗಳನ್ನು ಪೂರೈಸಿ ಸಂಸ್ಥೆ ಮುನ್ನಡೆಯುತ್ತಿದ್ದು, ಹಲವು ಮೈಲುಗಲ್ಲುಗಳನ್ನು ಸ್ಥಾಪಿಸಿ ದೇಶದ ನವರತ್ನ ಸಂಸ್ಥೆಗಳಲ್ಲಿಯೇ ಮಹಾರತ್ನ ಸಂಸ್ಥೆಯಾಗಿ ದೇಶದ ಅಭಿವೃದ್ಧಿಗೆ ಅನುಪಮ ಕೊಡುಗೆ ನೀಡುತ್ತಿದೆ. 13ನೇ ಪಂಚವಾರ್ಷಿಕ ಯೋಜನೆಯಲ್ಲಿ ಈಗಾಗಲೇ 7,01,483 ಕೋಟಿ ರೂಪಾಯಿಗಳನ್ನು ಗಮನಾರ್ಹ ಹೂಡಿಕೆ ಮಾಡಿದೆ. ಗ್ರಾಹಕರ ಬೇಡಿಕೆಗನುಸಾರ ವಿವಿಧ ರೀತಿಯ ಸೌಲಭ್ಯಗಳನ್ನೊಳಗೊಂಡ ವಿವಿಧ ವಿಮಾ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದೆ ಎಂದರು.
ಅಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ ಮತ್ತು ಪ್ರತಿನಿಧಿ ಪ್ರಭಾಕರ ಎಸ್.ಎನ್. ಮಾತನಾಡಿದರು. ಉಪ ಆಡಳಿತಾಧಿಕಾರಿ ಲಿಂಗಪ್ಪ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯಕ್ ವಂದಿಸಿದರು. ಪ್ರತಿನಿಧಿ ಬಿ.ಪದ್ಮನಾಭ ಶೆಟ್ಟಿ ನಿರೂಪಿಸಿದರು.
ಆಡಳಿತಾಧಿಕಾರಿ ಮಹಾಲಿಂಗ ನಾಯ್ಕ ,ಪ್ರತಿನಿಧಿಗಳಾದ ಮಾಧವ ಕೆ. ಜಾಲ್ಸೂರು ಮತ್ತು ಸೋಮನಾಥ ಕೇರ್ಪಳ, ಕಚೇರಿ ಸಹಾಯಕರಾದ ಸಂದೀಪ್ ಮತ್ತು ರಾಜೇಶ್ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…