Advertisement
ಸುದ್ದಿಗಳು

ಎಲ್ ಐ ಸಿ ಹಣ ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯ

Share

ಸುಳ್ಯ: ಭಾರತೀಯ ಜೀವ ವಿಮಾ ನಿಗಮದ ಸುಳ್ಯ ಉಪಗ್ರಹ ಶಾಖೆಯಲ್ಲಿ ನಿಗಮದ ಸಂಸ್ಥಾಪನಾ ದಿನಾಚರಣೆ ಮಂಗಳವಾರ ನಡೆಯಿತು.

ಮೊದಲ ಗ್ರಾಹಕ ರಾಜೇಂದ್ರಪ್ರಸಾದ್ ಮೂಡಿತ್ತಾಯ ಅವರು ಕಾರ್ಯಕ್ರಮ ಉದ್ಘಾಟಿಸಿ, ನಿಗಮವು ಗ್ರಾಹಕರ ಆಶೋತ್ತರಗಳಿಗೆ ಸ್ಪಂದಿಸಿ ಬಾಳಿಗೆ ಬೆಳಕು ನೀಡುತ್ತಿದೆ. ಇಲ್ಲಿ ತೊಡಗಿಸಿದ ಪ್ರತಿಯೊಬ್ಬರ ಹಣವೂ ಭದ್ರವಾಗಿದ್ದು ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯವೆಂದರು.

ಶಾಖಾಧಿಕಾರಿ ಜಿ. ಶಶಿಧರ ಹೆಗ್ಡೆ ಅವರು ನಿಗಮದ ಬಗ್ಗೆ ಮಾಹಿತಿ ನೀಡಿ 63 ಸಂವತ್ಸರಗಳನ್ನು ಪೂರೈಸಿ ಸಂಸ್ಥೆ ಮುನ್ನಡೆಯುತ್ತಿದ್ದು, ಹಲವು ಮೈಲುಗಲ್ಲುಗಳನ್ನು ಸ್ಥಾಪಿಸಿ ದೇಶದ ನವರತ್ನ ಸಂಸ್ಥೆಗಳಲ್ಲಿಯೇ ಮಹಾರತ್ನ ಸಂಸ್ಥೆಯಾಗಿ ದೇಶದ ಅಭಿವೃದ್ಧಿಗೆ ಅನುಪಮ ಕೊಡುಗೆ ನೀಡುತ್ತಿದೆ. 13ನೇ ಪಂಚವಾರ್ಷಿಕ ಯೋಜನೆಯಲ್ಲಿ ಈಗಾಗಲೇ 7,01,483 ಕೋಟಿ ರೂಪಾಯಿಗಳನ್ನು ಗಮನಾರ್ಹ ಹೂಡಿಕೆ ಮಾಡಿದೆ. ಗ್ರಾಹಕರ ಬೇಡಿಕೆಗನುಸಾರ ವಿವಿಧ ರೀತಿಯ ಸೌಲಭ್ಯಗಳನ್ನೊಳಗೊಂಡ ವಿವಿಧ ವಿಮಾ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದೆ ಎಂದರು.

ಅಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ ಮತ್ತು ಪ್ರತಿನಿಧಿ ಪ್ರಭಾಕರ ಎಸ್.ಎನ್. ಮಾತನಾಡಿದರು. ಉಪ ಆಡಳಿತಾಧಿಕಾರಿ ಲಿಂಗಪ್ಪ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯಕ್ ವಂದಿಸಿದರು. ಪ್ರತಿನಿಧಿ ಬಿ.ಪದ್ಮನಾಭ ಶೆಟ್ಟಿ ನಿರೂಪಿಸಿದರು.

ಆಡಳಿತಾಧಿಕಾರಿ ಮಹಾಲಿಂಗ ನಾಯ್ಕ ,ಪ್ರತಿನಿಧಿಗಳಾದ ಮಾಧವ ಕೆ. ಜಾಲ್ಸೂರು ಮತ್ತು ಸೋಮನಾಥ ಕೇರ್ಪಳ, ಕಚೇರಿ ಸಹಾಯಕರಾದ ಸಂದೀಪ್ ಮತ್ತು ರಾಜೇಶ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

11 minutes ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

49 minutes ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

10 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

14 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago