Advertisement
ಸುದ್ದಿಗಳು

ಎಲ್ ಐ ಸಿ ಹಣ ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯ

Share

ಸುಳ್ಯ: ಭಾರತೀಯ ಜೀವ ವಿಮಾ ನಿಗಮದ ಸುಳ್ಯ ಉಪಗ್ರಹ ಶಾಖೆಯಲ್ಲಿ ನಿಗಮದ ಸಂಸ್ಥಾಪನಾ ದಿನಾಚರಣೆ ಮಂಗಳವಾರ ನಡೆಯಿತು.

ಮೊದಲ ಗ್ರಾಹಕ ರಾಜೇಂದ್ರಪ್ರಸಾದ್ ಮೂಡಿತ್ತಾಯ ಅವರು ಕಾರ್ಯಕ್ರಮ ಉದ್ಘಾಟಿಸಿ, ನಿಗಮವು ಗ್ರಾಹಕರ ಆಶೋತ್ತರಗಳಿಗೆ ಸ್ಪಂದಿಸಿ ಬಾಳಿಗೆ ಬೆಳಕು ನೀಡುತ್ತಿದೆ. ಇಲ್ಲಿ ತೊಡಗಿಸಿದ ಪ್ರತಿಯೊಬ್ಬರ ಹಣವೂ ಭದ್ರವಾಗಿದ್ದು ಸಮಾಜದ ಒಳಿತಿಗಾಗಿ ಬಳಕೆಯಾಗುವುದು ಶ್ಲಾಘನೀಯವೆಂದರು.

ಶಾಖಾಧಿಕಾರಿ ಜಿ. ಶಶಿಧರ ಹೆಗ್ಡೆ ಅವರು ನಿಗಮದ ಬಗ್ಗೆ ಮಾಹಿತಿ ನೀಡಿ 63 ಸಂವತ್ಸರಗಳನ್ನು ಪೂರೈಸಿ ಸಂಸ್ಥೆ ಮುನ್ನಡೆಯುತ್ತಿದ್ದು, ಹಲವು ಮೈಲುಗಲ್ಲುಗಳನ್ನು ಸ್ಥಾಪಿಸಿ ದೇಶದ ನವರತ್ನ ಸಂಸ್ಥೆಗಳಲ್ಲಿಯೇ ಮಹಾರತ್ನ ಸಂಸ್ಥೆಯಾಗಿ ದೇಶದ ಅಭಿವೃದ್ಧಿಗೆ ಅನುಪಮ ಕೊಡುಗೆ ನೀಡುತ್ತಿದೆ. 13ನೇ ಪಂಚವಾರ್ಷಿಕ ಯೋಜನೆಯಲ್ಲಿ ಈಗಾಗಲೇ 7,01,483 ಕೋಟಿ ರೂಪಾಯಿಗಳನ್ನು ಗಮನಾರ್ಹ ಹೂಡಿಕೆ ಮಾಡಿದೆ. ಗ್ರಾಹಕರ ಬೇಡಿಕೆಗನುಸಾರ ವಿವಿಧ ರೀತಿಯ ಸೌಲಭ್ಯಗಳನ್ನೊಳಗೊಂಡ ವಿವಿಧ ವಿಮಾ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದೆ ಎಂದರು.

ಅಭಿವೃದ್ಧಿ ಅಧಿಕಾರಿ ಕೆ.ಶ್ರೀನಿವಾಸ ಮತ್ತು ಪ್ರತಿನಿಧಿ ಪ್ರಭಾಕರ ಎಸ್.ಎನ್. ಮಾತನಾಡಿದರು. ಉಪ ಆಡಳಿತಾಧಿಕಾರಿ ಲಿಂಗಪ್ಪ ಗೌಡ ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಉಮೇಶ್ ನಾಯಕ್ ವಂದಿಸಿದರು. ಪ್ರತಿನಿಧಿ ಬಿ.ಪದ್ಮನಾಭ ಶೆಟ್ಟಿ ನಿರೂಪಿಸಿದರು.

ಆಡಳಿತಾಧಿಕಾರಿ ಮಹಾಲಿಂಗ ನಾಯ್ಕ ,ಪ್ರತಿನಿಧಿಗಳಾದ ಮಾಧವ ಕೆ. ಜಾಲ್ಸೂರು ಮತ್ತು ಸೋಮನಾಥ ಕೇರ್ಪಳ, ಕಚೇರಿ ಸಹಾಯಕರಾದ ಸಂದೀಪ್ ಮತ್ತು ರಾಜೇಶ್ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

4 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

4 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

20 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago