Advertisement
ಸುದ್ದಿಗಳು

ಎಳೆಯ ವಿದ್ಯಾರ್ಥಿಗಳ ಬೌದ್ಧಿಕ ಜ್ಞಾನದ ವಿಕಸನಕ್ಕೆ ಚೆಸ್ ಆಟ ಪ್ರಯೋಜನಕಾರಿ

Share

ಸುಬ್ರಹ್ಮಣ್ಯ: ಎಳೆಯ ಮಕ್ಕಳಿಗೆ ಜ್ಞಾನಾರ್ಜನೆಗಾಗಿ ಬೌದ್ಧಿಕ ಸಂಪತ್ತು ಅಭ್ಯುದಯಗೊಳ್ಳಲು ಚೆಸ್ ಆಟ ಪ್ರಯೋಜನಕಾರಿಯಾಗಿದೆ.ಈ ಆಟವು ಚಾಕಚಕ್ಯತೆ ಮತ್ತು ಬುದ್ದಿಮತ್ತತೆಗೆ ಹೆಚ್ಚು ಒತ್ತು ನೀಡುತ್ತದೆ.ಆದುದರಿಂದ ಮಕ್ಕಳಲ್ಲಿ ಜ್ಞಾನ ಗಳಿಸಲು ಸಹಕಾರ ನೀಡುತ್ತದೆ.ಈ ಆಟವು ಏಕಾಗೃತಾ ಪಾಠವನ್ನು ಬೋಧಿಸುವುದರಿಂದ ಪಠ್ಯ ವಿಚಾರಗಳನ್ನು ಶೀಘ್ರ ಮನನ ಮಾಡಿಕೊಳ್ಳಲು ಉತ್ತಮವಾಗಿದೆ ಎಂದು ಚೆಸ್ ಆಟಗಾರ ಮತ್ತು ಉದ್ಯಮಿ ರತ್ನಾಕರ ಶೆಟ್ಟಿ ಹೇಳಿದರು.

ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಆಶ್ರಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಆರಂಭಗೊಂಡ ಚೆಸ್ ತರಬೇತಿ ತರಗತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾಲಯದಲ್ಲಿ ಮಕ್ಕಳಿಗೆ ಚೆಸ್ ತರಬೇತಿ ನೀಡುವುದರಿಂದ ಮಕ್ಕಳಿಗೆ ಬೌದ್ಧಿಕ ಸಂಪತ್ತು ಅನನ್ಯಗೊಳ್ಳುತ್ತದೆ.ಆದುದರಿಂದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಚೆಸ್ ಆಟದ ಬಗ್ಗೆ ವಿಶೇಷ ತರಬೇತಿ ನೀಡುವುದು ಅತ್ಯವಶ್ಯಕ.ಅಲ್ಲದೆ ಮಕ್ಕಳನ್ನು ಈ ಕ್ರೀಡೆ ಆಡುವಂತೆ ಪ್ರೋತ್ಸಾಹಿಸಬೇಕು ಎಂದರು.

ವಿದ್ಯಾಲಯದ ಸಂಚಾಲಕ ಚಂದ್ರಶೇಖರ ನಾಯರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಚೆಸ್ ತರಬೇತುದಾರ ಜಗನ್ನಾಥ್ ಮಂಗಳೂರು ಮುಖ್ಯಅತಿಥಿಯಾಗಿದ್ದರು. ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ವೇದಿಕೆಯಲ್ಲಿದ್ದರು.

ವಿದ್ಯಾರ್ಥಿ ಶಾಬ್ಧಿಕ್ ಸ್ವಾಗತಿಸಿ, ಅನನ್ಯ ಎಂ.ಡಿ ವಂದಿಸಿದರು. ವಿದ್ಯಾರ್ಥಿ ವೆನೆಸ್ಸಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು.ಈ ಬಳಿಕ ವಿದ್ಯಾರ್ಥಿಗಳಿಗೆ ಚೆಸ್ ತರಗತಿಗಳು ಆರಂಭಗೊಂಡಿತು. ಪ್ರಸಕ್ತ ವರ್ಷದಿಂದ ಪ್ರತಿ ಶುಕ್ರವಾರಂದು ಚೆಸ್ ತರಗತಿಯು ಸಂಸ್ಥೆಯಲ್ಲಿ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

1 day ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

1 day ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago