Advertisement
ಸುದ್ದಿಗಳು

ಎಳೆಯ ವಿದ್ಯಾರ್ಥಿಗಳ ಬೌದ್ಧಿಕ ಜ್ಞಾನದ ವಿಕಸನಕ್ಕೆ ಚೆಸ್ ಆಟ ಪ್ರಯೋಜನಕಾರಿ

Share

ಸುಬ್ರಹ್ಮಣ್ಯ: ಎಳೆಯ ಮಕ್ಕಳಿಗೆ ಜ್ಞಾನಾರ್ಜನೆಗಾಗಿ ಬೌದ್ಧಿಕ ಸಂಪತ್ತು ಅಭ್ಯುದಯಗೊಳ್ಳಲು ಚೆಸ್ ಆಟ ಪ್ರಯೋಜನಕಾರಿಯಾಗಿದೆ.ಈ ಆಟವು ಚಾಕಚಕ್ಯತೆ ಮತ್ತು ಬುದ್ದಿಮತ್ತತೆಗೆ ಹೆಚ್ಚು ಒತ್ತು ನೀಡುತ್ತದೆ.ಆದುದರಿಂದ ಮಕ್ಕಳಲ್ಲಿ ಜ್ಞಾನ ಗಳಿಸಲು ಸಹಕಾರ ನೀಡುತ್ತದೆ.ಈ ಆಟವು ಏಕಾಗೃತಾ ಪಾಠವನ್ನು ಬೋಧಿಸುವುದರಿಂದ ಪಠ್ಯ ವಿಚಾರಗಳನ್ನು ಶೀಘ್ರ ಮನನ ಮಾಡಿಕೊಳ್ಳಲು ಉತ್ತಮವಾಗಿದೆ ಎಂದು ಚೆಸ್ ಆಟಗಾರ ಮತ್ತು ಉದ್ಯಮಿ ರತ್ನಾಕರ ಶೆಟ್ಟಿ ಹೇಳಿದರು.

ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಆಶ್ರಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಆರಂಭಗೊಂಡ ಚೆಸ್ ತರಬೇತಿ ತರಗತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾಲಯದಲ್ಲಿ ಮಕ್ಕಳಿಗೆ ಚೆಸ್ ತರಬೇತಿ ನೀಡುವುದರಿಂದ ಮಕ್ಕಳಿಗೆ ಬೌದ್ಧಿಕ ಸಂಪತ್ತು ಅನನ್ಯಗೊಳ್ಳುತ್ತದೆ.ಆದುದರಿಂದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಚೆಸ್ ಆಟದ ಬಗ್ಗೆ ವಿಶೇಷ ತರಬೇತಿ ನೀಡುವುದು ಅತ್ಯವಶ್ಯಕ.ಅಲ್ಲದೆ ಮಕ್ಕಳನ್ನು ಈ ಕ್ರೀಡೆ ಆಡುವಂತೆ ಪ್ರೋತ್ಸಾಹಿಸಬೇಕು ಎಂದರು.

ವಿದ್ಯಾಲಯದ ಸಂಚಾಲಕ ಚಂದ್ರಶೇಖರ ನಾಯರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಚೆಸ್ ತರಬೇತುದಾರ ಜಗನ್ನಾಥ್ ಮಂಗಳೂರು ಮುಖ್ಯಅತಿಥಿಯಾಗಿದ್ದರು. ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ವೇದಿಕೆಯಲ್ಲಿದ್ದರು.

ವಿದ್ಯಾರ್ಥಿ ಶಾಬ್ಧಿಕ್ ಸ್ವಾಗತಿಸಿ, ಅನನ್ಯ ಎಂ.ಡಿ ವಂದಿಸಿದರು. ವಿದ್ಯಾರ್ಥಿ ವೆನೆಸ್ಸಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು.ಈ ಬಳಿಕ ವಿದ್ಯಾರ್ಥಿಗಳಿಗೆ ಚೆಸ್ ತರಗತಿಗಳು ಆರಂಭಗೊಂಡಿತು. ಪ್ರಸಕ್ತ ವರ್ಷದಿಂದ ಪ್ರತಿ ಶುಕ್ರವಾರಂದು ಚೆಸ್ ತರಗತಿಯು ಸಂಸ್ಥೆಯಲ್ಲಿ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago