ಸುಬ್ರಹ್ಮಣ್ಯ: ಎಳೆಯ ಮಕ್ಕಳಿಗೆ ಜ್ಞಾನಾರ್ಜನೆಗಾಗಿ ಬೌದ್ಧಿಕ ಸಂಪತ್ತು ಅಭ್ಯುದಯಗೊಳ್ಳಲು ಚೆಸ್ ಆಟ ಪ್ರಯೋಜನಕಾರಿಯಾಗಿದೆ.ಈ ಆಟವು ಚಾಕಚಕ್ಯತೆ ಮತ್ತು ಬುದ್ದಿಮತ್ತತೆಗೆ ಹೆಚ್ಚು ಒತ್ತು ನೀಡುತ್ತದೆ.ಆದುದರಿಂದ ಮಕ್ಕಳಲ್ಲಿ ಜ್ಞಾನ ಗಳಿಸಲು ಸಹಕಾರ ನೀಡುತ್ತದೆ.ಈ ಆಟವು ಏಕಾಗೃತಾ ಪಾಠವನ್ನು ಬೋಧಿಸುವುದರಿಂದ ಪಠ್ಯ ವಿಚಾರಗಳನ್ನು ಶೀಘ್ರ ಮನನ ಮಾಡಿಕೊಳ್ಳಲು ಉತ್ತಮವಾಗಿದೆ ಎಂದು ಚೆಸ್ ಆಟಗಾರ ಮತ್ತು ಉದ್ಯಮಿ ರತ್ನಾಕರ ಶೆಟ್ಟಿ ಹೇಳಿದರು.
ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಆಶ್ರಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಆರಂಭಗೊಂಡ ಚೆಸ್ ತರಬೇತಿ ತರಗತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾಲಯದಲ್ಲಿ ಮಕ್ಕಳಿಗೆ ಚೆಸ್ ತರಬೇತಿ ನೀಡುವುದರಿಂದ ಮಕ್ಕಳಿಗೆ ಬೌದ್ಧಿಕ ಸಂಪತ್ತು ಅನನ್ಯಗೊಳ್ಳುತ್ತದೆ.ಆದುದರಿಂದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಚೆಸ್ ಆಟದ ಬಗ್ಗೆ ವಿಶೇಷ ತರಬೇತಿ ನೀಡುವುದು ಅತ್ಯವಶ್ಯಕ.ಅಲ್ಲದೆ ಮಕ್ಕಳನ್ನು ಈ ಕ್ರೀಡೆ ಆಡುವಂತೆ ಪ್ರೋತ್ಸಾಹಿಸಬೇಕು ಎಂದರು.
ವಿದ್ಯಾಲಯದ ಸಂಚಾಲಕ ಚಂದ್ರಶೇಖರ ನಾಯರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಚೆಸ್ ತರಬೇತುದಾರ ಜಗನ್ನಾಥ್ ಮಂಗಳೂರು ಮುಖ್ಯಅತಿಥಿಯಾಗಿದ್ದರು. ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ವೇದಿಕೆಯಲ್ಲಿದ್ದರು.
ವಿದ್ಯಾರ್ಥಿ ಶಾಬ್ಧಿಕ್ ಸ್ವಾಗತಿಸಿ, ಅನನ್ಯ ಎಂ.ಡಿ ವಂದಿಸಿದರು. ವಿದ್ಯಾರ್ಥಿ ವೆನೆಸ್ಸಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು.ಈ ಬಳಿಕ ವಿದ್ಯಾರ್ಥಿಗಳಿಗೆ ಚೆಸ್ ತರಗತಿಗಳು ಆರಂಭಗೊಂಡಿತು. ಪ್ರಸಕ್ತ ವರ್ಷದಿಂದ ಪ್ರತಿ ಶುಕ್ರವಾರಂದು ಚೆಸ್ ತರಗತಿಯು ಸಂಸ್ಥೆಯಲ್ಲಿ ನಡೆಯಲಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…