ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವಾರ್ಷಿಕ ಕೌನ್ಸಿಲ್ ಸಂಗಮ ಜನವರಿ 19ರಂದು ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ ಅಧ್ಯಕ್ಷತೆಯಲ್ಲಿ ಸುನ್ನಿ ಸೆಂಟರ್ ನಲ್ಲಿ ಜರಗಿತು. ಶಾಖಾ ಎಸ್ಸೆಸ್ಸೆಫ್ ನ ಉಪಾಧ್ಯಕ್ಷ ರಶೀದ್ ಝೈನಿ ದುಆ ನೆರವೇರಿಸಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಸದಸ್ಯರಾದ ರಫೀಖ್ ಅಂಜದಿ ಇಂದ್ರಾಜೆ ಉದ್ಘಾಟಿಸಿದರು. ಕೆ.ಸಿ.ಎಫ್ ಅಬುಧಾಬಿ ಸದಸ್ಯ ಕಬೀರ್ ಜಟ್ಟಿಪಳ್ಳ ಸಂಘಟನಾ ತರಬೇತಿ ನಡೆಸಿದರು. ಎಸ್.ವೈ.ಎಸ್ ಜಿಲ್ಲಾ ಸಮಿತಿ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಸೆಕ್ಟರ್ ಎಸ್ಸೆಸ್ಸೆಫ್ ಸದಸ್ಯ ಶರೀಫ್ ಜಯನಗರ ವೀಕ್ಷಕರಾಗಿದ್ದರು.
ಈ ಸಂಘಟನಾ ಅವಧಿಯ ಒಂದು ವರ್ಷದಲ್ಲಿ ಗಾಂಧಿನಗರದಾದ್ಯಂತ ಐದೂವರೆ ಲಕ್ಷಗಳ ಸಾಂತ್ವನ ಕಾರ್ಯಾಚರಣೆಗಳ ವರದಿ ಹಾಗೂ ಲೆಕ್ಕ ಪತ್ರವನ್ನು ಪ್ರ. ಕಾರ್ಯದರ್ಶಿ ಬಶೀರ್ ಕಲ್ಲುಮುಟ್ಲು ಹಾಗೂ ಕೋಶಾಧಿಕಾರಿ ನಾಫಿ ಕೆರೆಮೂಲೆ ಮಂಡಿಸಿದರು.
ಬಶೀರ್ ಕಲ್ಲುಮುಟ್ಲು ಸ್ವಾಗತಿಸಿ ಇಲ್ಯಾಸ್ ಗುರುಂಪು ವಂದಿಸಿದರು.
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…