ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವಾರ್ಷಿಕ ಕೌನ್ಸಿಲ್ ಸಂಗಮ ಜನವರಿ 19ರಂದು ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ ಅಧ್ಯಕ್ಷತೆಯಲ್ಲಿ ಸುನ್ನಿ ಸೆಂಟರ್ ನಲ್ಲಿ ಜರಗಿತು. ಶಾಖಾ ಎಸ್ಸೆಸ್ಸೆಫ್ ನ ಉಪಾಧ್ಯಕ್ಷ ರಶೀದ್ ಝೈನಿ ದುಆ ನೆರವೇರಿಸಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಸದಸ್ಯರಾದ ರಫೀಖ್ ಅಂಜದಿ ಇಂದ್ರಾಜೆ ಉದ್ಘಾಟಿಸಿದರು. ಕೆ.ಸಿ.ಎಫ್ ಅಬುಧಾಬಿ ಸದಸ್ಯ ಕಬೀರ್ ಜಟ್ಟಿಪಳ್ಳ ಸಂಘಟನಾ ತರಬೇತಿ ನಡೆಸಿದರು. ಎಸ್.ವೈ.ಎಸ್ ಜಿಲ್ಲಾ ಸಮಿತಿ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಸೆಕ್ಟರ್ ಎಸ್ಸೆಸ್ಸೆಫ್ ಸದಸ್ಯ ಶರೀಫ್ ಜಯನಗರ ವೀಕ್ಷಕರಾಗಿದ್ದರು.
ಈ ಸಂಘಟನಾ ಅವಧಿಯ ಒಂದು ವರ್ಷದಲ್ಲಿ ಗಾಂಧಿನಗರದಾದ್ಯಂತ ಐದೂವರೆ ಲಕ್ಷಗಳ ಸಾಂತ್ವನ ಕಾರ್ಯಾಚರಣೆಗಳ ವರದಿ ಹಾಗೂ ಲೆಕ್ಕ ಪತ್ರವನ್ನು ಪ್ರ. ಕಾರ್ಯದರ್ಶಿ ಬಶೀರ್ ಕಲ್ಲುಮುಟ್ಲು ಹಾಗೂ ಕೋಶಾಧಿಕಾರಿ ನಾಫಿ ಕೆರೆಮೂಲೆ ಮಂಡಿಸಿದರು.
ಬಶೀರ್ ಕಲ್ಲುಮುಟ್ಲು ಸ್ವಾಗತಿಸಿ ಇಲ್ಯಾಸ್ ಗುರುಂಪು ವಂದಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…