ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವಾರ್ಷಿಕ ಕೌನ್ಸಿಲ್ ಸಂಗಮ ಜನವರಿ 19ರಂದು ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ ಅಧ್ಯಕ್ಷತೆಯಲ್ಲಿ ಸುನ್ನಿ ಸೆಂಟರ್ ನಲ್ಲಿ ಜರಗಿತು. ಶಾಖಾ ಎಸ್ಸೆಸ್ಸೆಫ್ ನ ಉಪಾಧ್ಯಕ್ಷ ರಶೀದ್ ಝೈನಿ ದುಆ ನೆರವೇರಿಸಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಸದಸ್ಯರಾದ ರಫೀಖ್ ಅಂಜದಿ ಇಂದ್ರಾಜೆ ಉದ್ಘಾಟಿಸಿದರು. ಕೆ.ಸಿ.ಎಫ್ ಅಬುಧಾಬಿ ಸದಸ್ಯ ಕಬೀರ್ ಜಟ್ಟಿಪಳ್ಳ ಸಂಘಟನಾ ತರಬೇತಿ ನಡೆಸಿದರು. ಎಸ್.ವೈ.ಎಸ್ ಜಿಲ್ಲಾ ಸಮಿತಿ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಸೆಕ್ಟರ್ ಎಸ್ಸೆಸ್ಸೆಫ್ ಸದಸ್ಯ ಶರೀಫ್ ಜಯನಗರ ವೀಕ್ಷಕರಾಗಿದ್ದರು.
ಈ ಸಂಘಟನಾ ಅವಧಿಯ ಒಂದು ವರ್ಷದಲ್ಲಿ ಗಾಂಧಿನಗರದಾದ್ಯಂತ ಐದೂವರೆ ಲಕ್ಷಗಳ ಸಾಂತ್ವನ ಕಾರ್ಯಾಚರಣೆಗಳ ವರದಿ ಹಾಗೂ ಲೆಕ್ಕ ಪತ್ರವನ್ನು ಪ್ರ. ಕಾರ್ಯದರ್ಶಿ ಬಶೀರ್ ಕಲ್ಲುಮುಟ್ಲು ಹಾಗೂ ಕೋಶಾಧಿಕಾರಿ ನಾಫಿ ಕೆರೆಮೂಲೆ ಮಂಡಿಸಿದರು.
ಬಶೀರ್ ಕಲ್ಲುಮುಟ್ಲು ಸ್ವಾಗತಿಸಿ ಇಲ್ಯಾಸ್ ಗುರುಂಪು ವಂದಿಸಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…