ಸುಳ್ಯ : ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಗಾಂಧಿನಗರ ಶಾಖೆಯ ವಾರ್ಷಿಕ ಕೌನ್ಸಿಲ್ ಸಂಗಮ ಜನವರಿ 19ರಂದು ಶಾಖಾಧ್ಯಕ್ಷ ಸಿದ್ದೀಖ್ ಬಿ.ಎ ಅಧ್ಯಕ್ಷತೆಯಲ್ಲಿ ಸುನ್ನಿ ಸೆಂಟರ್ ನಲ್ಲಿ ಜರಗಿತು. ಶಾಖಾ ಎಸ್ಸೆಸ್ಸೆಫ್ ನ ಉಪಾಧ್ಯಕ್ಷ ರಶೀದ್ ಝೈನಿ ದುಆ ನೆರವೇರಿಸಿದರು.
ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿ ಸದಸ್ಯರಾದ ರಫೀಖ್ ಅಂಜದಿ ಇಂದ್ರಾಜೆ ಉದ್ಘಾಟಿಸಿದರು. ಕೆ.ಸಿ.ಎಫ್ ಅಬುಧಾಬಿ ಸದಸ್ಯ ಕಬೀರ್ ಜಟ್ಟಿಪಳ್ಳ ಸಂಘಟನಾ ತರಬೇತಿ ನಡೆಸಿದರು. ಎಸ್.ವೈ.ಎಸ್ ಜಿಲ್ಲಾ ಸಮಿತಿ ಸದಸ್ಯ ಸಿದ್ದೀಖ್ ಕಟ್ಟೆಕಾರ್ ಮುಖ್ಯ ಅತಿಥಿಯಾಗಿದ್ದರು. ಸುಳ್ಯ ಸೆಕ್ಟರ್ ಎಸ್ಸೆಸ್ಸೆಫ್ ಸದಸ್ಯ ಶರೀಫ್ ಜಯನಗರ ವೀಕ್ಷಕರಾಗಿದ್ದರು.
ಈ ಸಂಘಟನಾ ಅವಧಿಯ ಒಂದು ವರ್ಷದಲ್ಲಿ ಗಾಂಧಿನಗರದಾದ್ಯಂತ ಐದೂವರೆ ಲಕ್ಷಗಳ ಸಾಂತ್ವನ ಕಾರ್ಯಾಚರಣೆಗಳ ವರದಿ ಹಾಗೂ ಲೆಕ್ಕ ಪತ್ರವನ್ನು ಪ್ರ. ಕಾರ್ಯದರ್ಶಿ ಬಶೀರ್ ಕಲ್ಲುಮುಟ್ಲು ಹಾಗೂ ಕೋಶಾಧಿಕಾರಿ ನಾಫಿ ಕೆರೆಮೂಲೆ ಮಂಡಿಸಿದರು.
ಬಶೀರ್ ಕಲ್ಲುಮುಟ್ಲು ಸ್ವಾಗತಿಸಿ ಇಲ್ಯಾಸ್ ಗುರುಂಪು ವಂದಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…