ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್ )ಸುಳ್ಯ ಸೆಕ್ಟರ್ ಸಮಿತಿ ವತಿಯಿಂದ ಉಲಾಝ್ ತರಬೇತಿ ಶಿಬಿರ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ನಡೆಯಿತು. ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷ ಸ್ವಬಾಹ್ ಹಿಮಮಿ ಬೀಜಕೊಚ್ಚಿ ಅಧ್ಯಕ್ಷತೆ ವಹಿಸಿದ್ದರು.
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಮಾಜಿ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಉದ್ಘಾಟಿಸಿದರು. ಎಸ್ಸೆಸ್ಸೆಫ್ ಕುಂಬ್ರ ಸೆಕ್ಟರ್ ಕ್ಯೂ ಟೀಂ ಟ್ಯೂಟರ್ ಕರೀಂ ಸಖಾಫಿ ಕಟ್ಟತ್ತಾರು ಸಂಪನ್ಮೂಲ ವ್ಯಕ್ತಿಗಳಾಗಿ ವಿಷಯ ಮಂಡಿಸಿದರು. ಹಝ್ರತ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್ ರವರ ಝಿಯಾರತ್ ಗೆ ನೂರುಲ್ ಇಸ್ಲಾಂ ಮದರಸಾ, ಮೊಗರ್ಪಣೆ ಸದರ್ ಮುಅಲ್ಲಿಂ ಮುಹಮ್ಮದ್ ಸಖಾಫಿ ಕೊಟ್ಟಮುಡಿ ನೇತೃತ್ವ ನೀಡಿದರು. ಮದರಸಾ ಮುಅಲ್ಲಿಂ ರಶೀದ್ ಝೈನಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಮಾಜಿ ಅಧ್ಯಕ್ಷ ಸಿದ್ದೀಕ್ ಕಟ್ಟೆಕಾರ್, ಸೆಕ್ಟರ್ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಮಟ್ಟದ ಪ್ರತಿಭೋತ್ಸವ ಡಿಸಂಬರ್ 8 ರಂದು ಕುಂಭಕ್ಕೋಡಿನಲ್ಲಿ ನಡೆಯಲಿದ್ದು, ಅದರ ಲಾಂಚಿಗ್ ಸೆಕ್ಟರ್ ಸಮಿತಿಯ ಪ್ರಥಮ ಮತ್ತು ದ್ವಿತೀಯ ಅವಧಿಗಳ ಅಧ್ಯಕ್ಷರುಗಳಾದ ಸಿದ್ದೀಕ್ ಕಟ್ಟೆಕಾರ್ ರವರು ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ರವರಿಗೆ ಪೋಸ್ಟರ್ ನೀಡಿ ಬಿಡುಗಡೆಗೊಳಿಸಲಾಯಿತು.
ಶಫೀಕ್ ಕೊಯಂಗಿ ಸ್ವಾಗತಿಸಿ, ಶಾಕಿರ್ ಮೊಗರ್ಪಣೆ ವಂದಿಸಿದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…