Advertisement
ಸುದ್ದಿಗಳು

ಎಸ್‌ಎಸ್‌ಎಫ್ ಸುಳ್ಯ ಡಿವಿಷನ್ ವತಿಯಿಂದ “ಮರ್ ಹಬಾ ಯಾ ರಬೀಅ್” ಮೀಲಾದ್ ಕಾಲ್ನಡಿಗೆ ಜಾಥಾ

Share

ಸುಳ್ಯ: ಲೋಕನೇತಾರರಾದ ಹಝ್ರತ್ ಮುಹಮ್ಮದ್ ಪೈಗಂಬರ್(ಸ) ರವರ ಜನ್ಮದಿನಾಚರಣೆ, ಎ.ಪಿ.ಉಸ್ತಾದರ ಕರ್ನಾಟಕ ಯಾತ್ರೆಯ ಐದನೇ ವರ್ಷದ ಸವಿನೆನಪು ಹಾಗೂ ನ. 7ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ ಹುಬ್ಬುರ್ರಸೂಲ್ ಕಾನ್ಫರೆನ್ಸ್ ಕಾರ್ಯಕ್ರಮದ ಪ್ರಚಾರಾರ್ಥವಾಗಿ ಎಸ್‌.ಎಸ್‌.ಎಫ್ ಸುಳ್ಯ ಡಿವಿಷನ್ ವತಿಯಿಂದ ಮೊಗರ್ಪಣೆಯಿಂದ ಗಾಂಧಿನಗರದವರೆಗೆ ಮರ್ ಹಬಾ ಯಾ ರಬೀಅ್ ಬೃಹತ್ ಮೀಲಾದ್ ಜಾಥಾ ಕಾರ್ಯಕ್ರಮವು ನಡೆಯಿತು.

ಸುನ್ನೀ ಜಂಇಯ್ಯತ್ತುಲ್ ಉಲಮಾ ತಾಲೂಕು ಸಮಿತಿ ಅಧ್ಯಕ್ಷರಾದ ಅಸಯ್ಯದ್ ಕುಂಞಿಕೋಯ ಸಅದಿ ತಂಞಳ್ ಹಾಗೂ ಮೊಗರ್ಪಣೆ ಮಸೀದಿಯ ಖತೀಬರಾದ ಅಹಮ್ಮದ್ ಸಖಾಫಿರವರು ಮಾಂಬಿಳಿ ಮಖಾಂ ಝಿಯಾರತ್ತಿಗೆ ನೇತೃತ್ವ ನೀಡಿ ಧ್ವಜವನ್ನು ಹಸ್ತಾಂತರಿಸಿ ಜಾಥಾಗೆ ಚಾಲನೆ ನೀಡಿದರು.

ಈ ಸಮಾರಂಭದಲ್ಲಿ ಸುನ್ನೀ ಸಂಘಟನೆಗಳ ನಾಯಕರುಗಳಾದ ಅಬ್ದುಲ್ ಹಮೀದ್ ಬೀಜಕೊಚ್ಚಿ, ಹಸನ್ ಸಖಾಫಿ ಬೆಳ್ಳಾರೆ, ಯೂಸುಫ್ ಹಾಜಿ ಬಿಳಿಯಾರು, ಎ.ಬಿ.ಅಶ್ರಫ್ ಸಅದಿ, ಅಂದುಂಞಿ ಗೋರಡ್ಕ, ಝೈನುಲ್ ಅಬಿದೀನ್ ತಂಙಳ್ ಜಯನಗರ, ಲತೀಫ್ ಸಖಾಫಿ ಮಾಡನ್ನೂರು, ಲತೀಫ್ ಸಖಾಫಿ ಗೂನಡ್ಕ, ಮಹಮ್ಮದ್ ಆಲಿ ಸಖಾಫಿ ಗೂನಡ್ಕ, ಸಿದ್ದೀಕ್ ಕಟ್ಟೆಕ್ಕಾರ್, ಅಬ್ದುಲ್ ರಹಿಮಾನ್ ಮೊಗರ್ಪಣೆ, ಶಮೀರ್ ಮೊಗರ್ಪಣೆ, ಮೂಸಾ ಪೈಂಬಚ್ಚಾಲ್, ಸಿದ್ದೀಕ್ ಗೂನಡ್ಕ ಮೊದಲಾದವರು ಉಪಸ್ಥಿತರಿದ್ದರು.

ಕೊನೆಯಲ್ಲಿ ಗಾಂಧಿನಗರ ಪೆಟ್ರೋಲ್ ಪಂಪ್‌ನ ಮುಂಭಾಗ ಹುಬ್ಬುರ್ರಸೂಲ್ ಸಂದೇಶ ಭಾಷಣವು ನಡೆಯಿತು. ಎಸ್‌ಎಸ್‌ಎಫ್ ರಾಜ್ಯ ಸಮಿತಿ ಕಾರ್ಯದರ್ಶಿ ಅಶ್ರಫ್ ರಝಾ ಅಮ್ಜದಿ ಮುಖ್ಯ ಪ್ರಭಾಷಣ ನಡೆಸಿದರು. ಸುಳ್ಯ ಡಿವಿಷನ್ ಎಸ್‌.ಎಸ್‌.ಎಫ್‌ ಸಮಿತಿ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಮ್ಜದಿ ಅಧ್ಯಕ್ಷತೆ ವಹಿಸಿದರು. ನ.ಪಂ. ಸದಸ್ಯರುಗಳಾದ ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ರಾಜ್ಯ ಎಸ್.ಎಸ್.ಎಫ್ ಕೋಶಾಧಿಕಾರಿ ರವೂಫ್ ಖಾನ್ ಮೂಡುಗೋಪಾಡಿ ಮೊದಲಾದವರು ಉಪಸ್ಥಿತರಿದ್ದರು. ಡಿವಿಷನ್ ಉಪಾಧ್ಯಕ್ಷ ಫೈಝಲ್ ಝುಹರಿ ಸ್ವಾಗತಿಸಿ, ಡಿವಿಷನ್ ಪ್ರ. ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ವಂದಿಸಿದರು. ಜಾಥಾದಲ್ಲಿ ಎಸ್‌.ಬಿ.ಎಸ್ ಮದ್ರಸ ವಿದ್ಯಾರ್ಥಿಗಳ ಆಕರ್ಷಕ ದಫ್ ಪ್ರದರ್ಶನವು ನಡೆಯಿತು. ಸುಮಾರು 500ಕ್ಕೂ ಹೆಚ್ಚು ಎಸ್‌ಎಸ್‌ಎಫ್ ಮತ್ತು ಸಹಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

29 seconds ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

11 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

12 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago