ನಮ್ಮೂರ ಸುದ್ದಿ

ಎಸ್‍ಎಸ್‍ಎಲ್‍ಸಿ ಮರುಮೌಲ್ಯಮಾಪನದಲ್ಲಿ ಗರಿ ಮುಡಿಗೇರಿಸಿದ ವಿದ್ಯಾರ್ಥಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ಯಾವತ್ತೂ ಯಶಸ್ಸು ಜೊತೆಗೇ ಇರುತ್ತದೆ. ಆದರೆ ಪ್ರಯತ್ನವೆಂಬುದು ಮುಖ್ಯ. ಮಾಡಿರುವ ಪ್ರಯತ್ನಕ್ಕೆ ಯಶಸ್ಸಂತೂ ಇದ್ದೇ ಇದೆ. ಆದರೆ ಕೆಲವೊಮ್ಮೆ ತಡವಾಗಬಹುದು ಅಷ್ಟೇ. ಇದಕ್ಕೆ ಉದಾಹರಣೆ ಎಣ್ಮೂರಿನ  ವಿದ್ಯಾರ್ಥಿ  ಮಹಮ್ಮದ್ ಮಝೀಫ್.

Advertisement

ಈತ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿ. ತನ್ನ ಜೀವನವನ್ನು ತಾನೇ ರೂಪಸಿಕೊಳ್ಳಬೇಕೆಂಬ ಛಲಕ್ಕೆ ಬಿದ್ದು ಶಾಲಾ ರಜಾ ದಿನಗಳಂದು ಕೇಟರಿಂಗ್‍ನಲ್ಲಿ ದುಡಿಯುತ್ತಿದ್ದ. ಸರಕಾರಿ ಶಾಲೆಯಲ್ಲಿ ಓದಿ ತಾಲೂಕಿಗೆ ದ್ವಿತೀಯ ಹಾಗೂ ಶಾಲೆಗೆ ಮೊದಲಿಗನಾದ. ಇದು ಇತ್ತೀಚೆಗಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613(ಶೇ98.8) ಗಳಿಸಿದ ಎಣ್ಮೂರಿನ ಮಹಮ್ಮದ್ ಮಝೀಫ್ ಸಾಧನೆಯಾಗಿದೆ. ಮಹಮ್ಮದ್ ಮಝೀಫ್ ಮುರುಳ್ಯ ಗ್ರಾಮದ ರಾಗಿ ಪೇಟೆಯ ಟಿ. ಮಹಮ್ಮದ್ ಹಾಗು ಸಮೀನಾ ಆರ್ ದಂಪತಿಯ ಪುತ್ರ. ಎಣ್ಮೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ.  ಎಣ್ಮೂರು ಶಾಲಾ ಅಧ್ಯಾಪಕರು ಉತ್ತಮ ಫಲಿತಾಂಶಕ್ಕಾಗಿ ಮಾಡಿದ ಶತಪ್ರಯತ್ನಕ್ಕೆ ನಿರೀಕ್ಷೆಗೂ ಮೀರಿ ಪ್ರತಿಫಲ ಮಝೀಫ್‍ನಿಗೆ ದೊರೆತಿದೆ. ಅಂದ ಹಾಗೆ ಮಝೀಫ್ ವಿಶೇಷವಾಗಿ ಗಣಿತದಲ್ಲಿ 100 ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ 125 ಪೂರ್ಣ ಅಂಕಗಳನ್ನು ಪಡೆದುಕೊಂಡಿದ್ದಾನೆ.

ಮರುಮೌಲ್ಯಮಾಪನದಿಂದ 3 ಅಂಕ ಹೆಚ್ಚು ದೊರೆಯಿತು :
ಫಲಿತಾಂಶದಂದು ಕನ್ನಡದಲ್ಲಿ 3 ಅಂಕಗಳು ಕಡಿಮೆ ನಮೂದನೆಗೊಂಡಿದ್ದು, ಉತ್ತರ ಪತ್ರಿಕೆಗಳ ಪ್ರತಿಯನ್ನು ತರಸಿ ಪರಿಶೀಲಿಸಿದಾಗ ಕನ್ನಡದಲ್ಲಿ ಪೂರ್ತಿ 125 ಅಂಕಗಳು ಇದ್ದು ಅಂಕಗಳ ಮರು ಎಣಿಕೆಗೆ ಹಾಕಿದ್ದಾನೆ. ತಪ್ಪು ಎಣಿಕೆಯಿಂದಾಗಿ 610 ಅಂಕಗಳನ್ನು ಗಳಿಸಿದ್ದ ವಿದ್ಯಾರ್ಥಿ ಮಝೀಫ್ ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಪಡೆದುಕೊಂಡು ಸುಳ್ಯ ತಾಲೂಕಿಗೆ ದ್ವಿತೀಯ ಹಾಗು ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ

18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

16 hours ago

ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾರತಕ್ಕೆ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…

23 hours ago

ರಾಜ್ಯದ ಕರಾವಳಿ, ಮಲೆನಾಡು ಭಾರೀ ಮಳೆ ಸಂಭವ | ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…

23 hours ago

ಬದುಕು ಪುರಾಣ | ಕೃಷ್ಣ ಬಂದ, ನೋಡಲಾಗಲಿಲ್ಲ..!

ಜೀವಿತದಲ್ಲಿ ಬದುಕಿನ ಸಾರವನ್ನೆಲ್ಲಾ ಅನುಭವಿಸಿದ ಏಕೈಕ ವ್ಯಕ್ತಿ ಶ್ರೀಕೃಷ್ಣ. ಪ್ರೀತಿ ಅಂದರೆ ಒಬ್ಬರನ್ನೊಬ್ಬರು…

24 hours ago

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

2 days ago

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

2 days ago