Advertisement
ನಮ್ಮೂರ ಸುದ್ದಿ

ಎಸ್‍ಎಸ್‍ಎಲ್‍ಸಿ ಮರುಮೌಲ್ಯಮಾಪನದಲ್ಲಿ ಗರಿ ಮುಡಿಗೇರಿಸಿದ ವಿದ್ಯಾರ್ಥಿ

Share

ಬೆಳ್ಳಾರೆ: ಯಾವತ್ತೂ ಯಶಸ್ಸು ಜೊತೆಗೇ ಇರುತ್ತದೆ. ಆದರೆ ಪ್ರಯತ್ನವೆಂಬುದು ಮುಖ್ಯ. ಮಾಡಿರುವ ಪ್ರಯತ್ನಕ್ಕೆ ಯಶಸ್ಸಂತೂ ಇದ್ದೇ ಇದೆ. ಆದರೆ ಕೆಲವೊಮ್ಮೆ ತಡವಾಗಬಹುದು ಅಷ್ಟೇ. ಇದಕ್ಕೆ ಉದಾಹರಣೆ ಎಣ್ಮೂರಿನ  ವಿದ್ಯಾರ್ಥಿ  ಮಹಮ್ಮದ್ ಮಝೀಫ್.

Advertisement
Advertisement

ಈತ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿ. ತನ್ನ ಜೀವನವನ್ನು ತಾನೇ ರೂಪಸಿಕೊಳ್ಳಬೇಕೆಂಬ ಛಲಕ್ಕೆ ಬಿದ್ದು ಶಾಲಾ ರಜಾ ದಿನಗಳಂದು ಕೇಟರಿಂಗ್‍ನಲ್ಲಿ ದುಡಿಯುತ್ತಿದ್ದ. ಸರಕಾರಿ ಶಾಲೆಯಲ್ಲಿ ಓದಿ ತಾಲೂಕಿಗೆ ದ್ವಿತೀಯ ಹಾಗೂ ಶಾಲೆಗೆ ಮೊದಲಿಗನಾದ. ಇದು ಇತ್ತೀಚೆಗಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613(ಶೇ98.8) ಗಳಿಸಿದ ಎಣ್ಮೂರಿನ ಮಹಮ್ಮದ್ ಮಝೀಫ್ ಸಾಧನೆಯಾಗಿದೆ. ಮಹಮ್ಮದ್ ಮಝೀಫ್ ಮುರುಳ್ಯ ಗ್ರಾಮದ ರಾಗಿ ಪೇಟೆಯ ಟಿ. ಮಹಮ್ಮದ್ ಹಾಗು ಸಮೀನಾ ಆರ್ ದಂಪತಿಯ ಪುತ್ರ. ಎಣ್ಮೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ.  ಎಣ್ಮೂರು ಶಾಲಾ ಅಧ್ಯಾಪಕರು ಉತ್ತಮ ಫಲಿತಾಂಶಕ್ಕಾಗಿ ಮಾಡಿದ ಶತಪ್ರಯತ್ನಕ್ಕೆ ನಿರೀಕ್ಷೆಗೂ ಮೀರಿ ಪ್ರತಿಫಲ ಮಝೀಫ್‍ನಿಗೆ ದೊರೆತಿದೆ. ಅಂದ ಹಾಗೆ ಮಝೀಫ್ ವಿಶೇಷವಾಗಿ ಗಣಿತದಲ್ಲಿ 100 ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ 125 ಪೂರ್ಣ ಅಂಕಗಳನ್ನು ಪಡೆದುಕೊಂಡಿದ್ದಾನೆ.

ಮರುಮೌಲ್ಯಮಾಪನದಿಂದ 3 ಅಂಕ ಹೆಚ್ಚು ದೊರೆಯಿತು :
ಫಲಿತಾಂಶದಂದು ಕನ್ನಡದಲ್ಲಿ 3 ಅಂಕಗಳು ಕಡಿಮೆ ನಮೂದನೆಗೊಂಡಿದ್ದು, ಉತ್ತರ ಪತ್ರಿಕೆಗಳ ಪ್ರತಿಯನ್ನು ತರಸಿ ಪರಿಶೀಲಿಸಿದಾಗ ಕನ್ನಡದಲ್ಲಿ ಪೂರ್ತಿ 125 ಅಂಕಗಳು ಇದ್ದು ಅಂಕಗಳ ಮರು ಎಣಿಕೆಗೆ ಹಾಕಿದ್ದಾನೆ. ತಪ್ಪು ಎಣಿಕೆಯಿಂದಾಗಿ 610 ಅಂಕಗಳನ್ನು ಗಳಿಸಿದ್ದ ವಿದ್ಯಾರ್ಥಿ ಮಝೀಫ್ ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಪಡೆದುಕೊಂಡು ಸುಳ್ಯ ತಾಲೂಕಿಗೆ ದ್ವಿತೀಯ ಹಾಗು ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

9 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

9 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago