ನಮ್ಮೂರ ಸುದ್ದಿ

ಎಸ್‍ಎಸ್‍ಎಲ್‍ಸಿ ಮರುಮೌಲ್ಯಮಾಪನದಲ್ಲಿ ಗರಿ ಮುಡಿಗೇರಿಸಿದ ವಿದ್ಯಾರ್ಥಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ: ಯಾವತ್ತೂ ಯಶಸ್ಸು ಜೊತೆಗೇ ಇರುತ್ತದೆ. ಆದರೆ ಪ್ರಯತ್ನವೆಂಬುದು ಮುಖ್ಯ. ಮಾಡಿರುವ ಪ್ರಯತ್ನಕ್ಕೆ ಯಶಸ್ಸಂತೂ ಇದ್ದೇ ಇದೆ. ಆದರೆ ಕೆಲವೊಮ್ಮೆ ತಡವಾಗಬಹುದು ಅಷ್ಟೇ. ಇದಕ್ಕೆ ಉದಾಹರಣೆ ಎಣ್ಮೂರಿನ  ವಿದ್ಯಾರ್ಥಿ  ಮಹಮ್ಮದ್ ಮಝೀಫ್.

Advertisement
Advertisement

ಈತ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿ. ತನ್ನ ಜೀವನವನ್ನು ತಾನೇ ರೂಪಸಿಕೊಳ್ಳಬೇಕೆಂಬ ಛಲಕ್ಕೆ ಬಿದ್ದು ಶಾಲಾ ರಜಾ ದಿನಗಳಂದು ಕೇಟರಿಂಗ್‍ನಲ್ಲಿ ದುಡಿಯುತ್ತಿದ್ದ. ಸರಕಾರಿ ಶಾಲೆಯಲ್ಲಿ ಓದಿ ತಾಲೂಕಿಗೆ ದ್ವಿತೀಯ ಹಾಗೂ ಶಾಲೆಗೆ ಮೊದಲಿಗನಾದ. ಇದು ಇತ್ತೀಚೆಗಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613(ಶೇ98.8) ಗಳಿಸಿದ ಎಣ್ಮೂರಿನ ಮಹಮ್ಮದ್ ಮಝೀಫ್ ಸಾಧನೆಯಾಗಿದೆ. ಮಹಮ್ಮದ್ ಮಝೀಫ್ ಮುರುಳ್ಯ ಗ್ರಾಮದ ರಾಗಿ ಪೇಟೆಯ ಟಿ. ಮಹಮ್ಮದ್ ಹಾಗು ಸಮೀನಾ ಆರ್ ದಂಪತಿಯ ಪುತ್ರ. ಎಣ್ಮೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ.  ಎಣ್ಮೂರು ಶಾಲಾ ಅಧ್ಯಾಪಕರು ಉತ್ತಮ ಫಲಿತಾಂಶಕ್ಕಾಗಿ ಮಾಡಿದ ಶತಪ್ರಯತ್ನಕ್ಕೆ ನಿರೀಕ್ಷೆಗೂ ಮೀರಿ ಪ್ರತಿಫಲ ಮಝೀಫ್‍ನಿಗೆ ದೊರೆತಿದೆ. ಅಂದ ಹಾಗೆ ಮಝೀಫ್ ವಿಶೇಷವಾಗಿ ಗಣಿತದಲ್ಲಿ 100 ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ 125 ಪೂರ್ಣ ಅಂಕಗಳನ್ನು ಪಡೆದುಕೊಂಡಿದ್ದಾನೆ.

ಮರುಮೌಲ್ಯಮಾಪನದಿಂದ 3 ಅಂಕ ಹೆಚ್ಚು ದೊರೆಯಿತು :
ಫಲಿತಾಂಶದಂದು ಕನ್ನಡದಲ್ಲಿ 3 ಅಂಕಗಳು ಕಡಿಮೆ ನಮೂದನೆಗೊಂಡಿದ್ದು, ಉತ್ತರ ಪತ್ರಿಕೆಗಳ ಪ್ರತಿಯನ್ನು ತರಸಿ ಪರಿಶೀಲಿಸಿದಾಗ ಕನ್ನಡದಲ್ಲಿ ಪೂರ್ತಿ 125 ಅಂಕಗಳು ಇದ್ದು ಅಂಕಗಳ ಮರು ಎಣಿಕೆಗೆ ಹಾಕಿದ್ದಾನೆ. ತಪ್ಪು ಎಣಿಕೆಯಿಂದಾಗಿ 610 ಅಂಕಗಳನ್ನು ಗಳಿಸಿದ್ದ ವಿದ್ಯಾರ್ಥಿ ಮಝೀಫ್ ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಪಡೆದುಕೊಂಡು ಸುಳ್ಯ ತಾಲೂಕಿಗೆ ದ್ವಿತೀಯ ಹಾಗು ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

8 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago