Advertisement
ನಮ್ಮೂರ ಸುದ್ದಿ

ಎಸ್‍ಎಸ್‍ಎಲ್‍ಸಿ ಮರುಮೌಲ್ಯಮಾಪನದಲ್ಲಿ ಗರಿ ಮುಡಿಗೇರಿಸಿದ ವಿದ್ಯಾರ್ಥಿ

Share

ಬೆಳ್ಳಾರೆ: ಯಾವತ್ತೂ ಯಶಸ್ಸು ಜೊತೆಗೇ ಇರುತ್ತದೆ. ಆದರೆ ಪ್ರಯತ್ನವೆಂಬುದು ಮುಖ್ಯ. ಮಾಡಿರುವ ಪ್ರಯತ್ನಕ್ಕೆ ಯಶಸ್ಸಂತೂ ಇದ್ದೇ ಇದೆ. ಆದರೆ ಕೆಲವೊಮ್ಮೆ ತಡವಾಗಬಹುದು ಅಷ್ಟೇ. ಇದಕ್ಕೆ ಉದಾಹರಣೆ ಎಣ್ಮೂರಿನ  ವಿದ್ಯಾರ್ಥಿ  ಮಹಮ್ಮದ್ ಮಝೀಫ್.

ಈತ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿ. ತನ್ನ ಜೀವನವನ್ನು ತಾನೇ ರೂಪಸಿಕೊಳ್ಳಬೇಕೆಂಬ ಛಲಕ್ಕೆ ಬಿದ್ದು ಶಾಲಾ ರಜಾ ದಿನಗಳಂದು ಕೇಟರಿಂಗ್‍ನಲ್ಲಿ ದುಡಿಯುತ್ತಿದ್ದ. ಸರಕಾರಿ ಶಾಲೆಯಲ್ಲಿ ಓದಿ ತಾಲೂಕಿಗೆ ದ್ವಿತೀಯ ಹಾಗೂ ಶಾಲೆಗೆ ಮೊದಲಿಗನಾದ. ಇದು ಇತ್ತೀಚೆಗಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613(ಶೇ98.8) ಗಳಿಸಿದ ಎಣ್ಮೂರಿನ ಮಹಮ್ಮದ್ ಮಝೀಫ್ ಸಾಧನೆಯಾಗಿದೆ. ಮಹಮ್ಮದ್ ಮಝೀಫ್ ಮುರುಳ್ಯ ಗ್ರಾಮದ ರಾಗಿ ಪೇಟೆಯ ಟಿ. ಮಹಮ್ಮದ್ ಹಾಗು ಸಮೀನಾ ಆರ್ ದಂಪತಿಯ ಪುತ್ರ. ಎಣ್ಮೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ.  ಎಣ್ಮೂರು ಶಾಲಾ ಅಧ್ಯಾಪಕರು ಉತ್ತಮ ಫಲಿತಾಂಶಕ್ಕಾಗಿ ಮಾಡಿದ ಶತಪ್ರಯತ್ನಕ್ಕೆ ನಿರೀಕ್ಷೆಗೂ ಮೀರಿ ಪ್ರತಿಫಲ ಮಝೀಫ್‍ನಿಗೆ ದೊರೆತಿದೆ. ಅಂದ ಹಾಗೆ ಮಝೀಫ್ ವಿಶೇಷವಾಗಿ ಗಣಿತದಲ್ಲಿ 100 ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ 125 ಪೂರ್ಣ ಅಂಕಗಳನ್ನು ಪಡೆದುಕೊಂಡಿದ್ದಾನೆ.

ಮರುಮೌಲ್ಯಮಾಪನದಿಂದ 3 ಅಂಕ ಹೆಚ್ಚು ದೊರೆಯಿತು :
ಫಲಿತಾಂಶದಂದು ಕನ್ನಡದಲ್ಲಿ 3 ಅಂಕಗಳು ಕಡಿಮೆ ನಮೂದನೆಗೊಂಡಿದ್ದು, ಉತ್ತರ ಪತ್ರಿಕೆಗಳ ಪ್ರತಿಯನ್ನು ತರಸಿ ಪರಿಶೀಲಿಸಿದಾಗ ಕನ್ನಡದಲ್ಲಿ ಪೂರ್ತಿ 125 ಅಂಕಗಳು ಇದ್ದು ಅಂಕಗಳ ಮರು ಎಣಿಕೆಗೆ ಹಾಕಿದ್ದಾನೆ. ತಪ್ಪು ಎಣಿಕೆಯಿಂದಾಗಿ 610 ಅಂಕಗಳನ್ನು ಗಳಿಸಿದ್ದ ವಿದ್ಯಾರ್ಥಿ ಮಝೀಫ್ ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಪಡೆದುಕೊಂಡು ಸುಳ್ಯ ತಾಲೂಕಿಗೆ ದ್ವಿತೀಯ ಹಾಗು ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

8 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

8 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

19 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

23 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago