Advertisement
ನಮ್ಮೂರ ಸುದ್ದಿ

ಎಸ್‍ಎಸ್‍ಎಲ್‍ಸಿ ಮರುಮೌಲ್ಯಮಾಪನದಲ್ಲಿ ಗರಿ ಮುಡಿಗೇರಿಸಿದ ವಿದ್ಯಾರ್ಥಿ

Share

ಬೆಳ್ಳಾರೆ: ಯಾವತ್ತೂ ಯಶಸ್ಸು ಜೊತೆಗೇ ಇರುತ್ತದೆ. ಆದರೆ ಪ್ರಯತ್ನವೆಂಬುದು ಮುಖ್ಯ. ಮಾಡಿರುವ ಪ್ರಯತ್ನಕ್ಕೆ ಯಶಸ್ಸಂತೂ ಇದ್ದೇ ಇದೆ. ಆದರೆ ಕೆಲವೊಮ್ಮೆ ತಡವಾಗಬಹುದು ಅಷ್ಟೇ. ಇದಕ್ಕೆ ಉದಾಹರಣೆ ಎಣ್ಮೂರಿನ  ವಿದ್ಯಾರ್ಥಿ  ಮಹಮ್ಮದ್ ಮಝೀಫ್.

Advertisement

ಈತ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿ. ತನ್ನ ಜೀವನವನ್ನು ತಾನೇ ರೂಪಸಿಕೊಳ್ಳಬೇಕೆಂಬ ಛಲಕ್ಕೆ ಬಿದ್ದು ಶಾಲಾ ರಜಾ ದಿನಗಳಂದು ಕೇಟರಿಂಗ್‍ನಲ್ಲಿ ದುಡಿಯುತ್ತಿದ್ದ. ಸರಕಾರಿ ಶಾಲೆಯಲ್ಲಿ ಓದಿ ತಾಲೂಕಿಗೆ ದ್ವಿತೀಯ ಹಾಗೂ ಶಾಲೆಗೆ ಮೊದಲಿಗನಾದ. ಇದು ಇತ್ತೀಚೆಗಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613(ಶೇ98.8) ಗಳಿಸಿದ ಎಣ್ಮೂರಿನ ಮಹಮ್ಮದ್ ಮಝೀಫ್ ಸಾಧನೆಯಾಗಿದೆ. ಮಹಮ್ಮದ್ ಮಝೀಫ್ ಮುರುಳ್ಯ ಗ್ರಾಮದ ರಾಗಿ ಪೇಟೆಯ ಟಿ. ಮಹಮ್ಮದ್ ಹಾಗು ಸಮೀನಾ ಆರ್ ದಂಪತಿಯ ಪುತ್ರ. ಎಣ್ಮೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ.  ಎಣ್ಮೂರು ಶಾಲಾ ಅಧ್ಯಾಪಕರು ಉತ್ತಮ ಫಲಿತಾಂಶಕ್ಕಾಗಿ ಮಾಡಿದ ಶತಪ್ರಯತ್ನಕ್ಕೆ ನಿರೀಕ್ಷೆಗೂ ಮೀರಿ ಪ್ರತಿಫಲ ಮಝೀಫ್‍ನಿಗೆ ದೊರೆತಿದೆ. ಅಂದ ಹಾಗೆ ಮಝೀಫ್ ವಿಶೇಷವಾಗಿ ಗಣಿತದಲ್ಲಿ 100 ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ 125 ಪೂರ್ಣ ಅಂಕಗಳನ್ನು ಪಡೆದುಕೊಂಡಿದ್ದಾನೆ.

ಮರುಮೌಲ್ಯಮಾಪನದಿಂದ 3 ಅಂಕ ಹೆಚ್ಚು ದೊರೆಯಿತು :
ಫಲಿತಾಂಶದಂದು ಕನ್ನಡದಲ್ಲಿ 3 ಅಂಕಗಳು ಕಡಿಮೆ ನಮೂದನೆಗೊಂಡಿದ್ದು, ಉತ್ತರ ಪತ್ರಿಕೆಗಳ ಪ್ರತಿಯನ್ನು ತರಸಿ ಪರಿಶೀಲಿಸಿದಾಗ ಕನ್ನಡದಲ್ಲಿ ಪೂರ್ತಿ 125 ಅಂಕಗಳು ಇದ್ದು ಅಂಕಗಳ ಮರು ಎಣಿಕೆಗೆ ಹಾಕಿದ್ದಾನೆ. ತಪ್ಪು ಎಣಿಕೆಯಿಂದಾಗಿ 610 ಅಂಕಗಳನ್ನು ಗಳಿಸಿದ್ದ ವಿದ್ಯಾರ್ಥಿ ಮಝೀಫ್ ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಪಡೆದುಕೊಂಡು ಸುಳ್ಯ ತಾಲೂಕಿಗೆ ದ್ವಿತೀಯ ಹಾಗು ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

4 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

4 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

5 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

5 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

14 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago