Advertisement
ನಮ್ಮೂರ ಸುದ್ದಿ

ಎಸ್‍ಎಸ್‍ಎಲ್‍ಸಿ ಮರುಮೌಲ್ಯಮಾಪನದಲ್ಲಿ ಗರಿ ಮುಡಿಗೇರಿಸಿದ ವಿದ್ಯಾರ್ಥಿ

Share

ಬೆಳ್ಳಾರೆ: ಯಾವತ್ತೂ ಯಶಸ್ಸು ಜೊತೆಗೇ ಇರುತ್ತದೆ. ಆದರೆ ಪ್ರಯತ್ನವೆಂಬುದು ಮುಖ್ಯ. ಮಾಡಿರುವ ಪ್ರಯತ್ನಕ್ಕೆ ಯಶಸ್ಸಂತೂ ಇದ್ದೇ ಇದೆ. ಆದರೆ ಕೆಲವೊಮ್ಮೆ ತಡವಾಗಬಹುದು ಅಷ್ಟೇ. ಇದಕ್ಕೆ ಉದಾಹರಣೆ ಎಣ್ಮೂರಿನ  ವಿದ್ಯಾರ್ಥಿ  ಮಹಮ್ಮದ್ ಮಝೀಫ್.

ಈತ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿ. ತನ್ನ ಜೀವನವನ್ನು ತಾನೇ ರೂಪಸಿಕೊಳ್ಳಬೇಕೆಂಬ ಛಲಕ್ಕೆ ಬಿದ್ದು ಶಾಲಾ ರಜಾ ದಿನಗಳಂದು ಕೇಟರಿಂಗ್‍ನಲ್ಲಿ ದುಡಿಯುತ್ತಿದ್ದ. ಸರಕಾರಿ ಶಾಲೆಯಲ್ಲಿ ಓದಿ ತಾಲೂಕಿಗೆ ದ್ವಿತೀಯ ಹಾಗೂ ಶಾಲೆಗೆ ಮೊದಲಿಗನಾದ. ಇದು ಇತ್ತೀಚೆಗಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613(ಶೇ98.8) ಗಳಿಸಿದ ಎಣ್ಮೂರಿನ ಮಹಮ್ಮದ್ ಮಝೀಫ್ ಸಾಧನೆಯಾಗಿದೆ. ಮಹಮ್ಮದ್ ಮಝೀಫ್ ಮುರುಳ್ಯ ಗ್ರಾಮದ ರಾಗಿ ಪೇಟೆಯ ಟಿ. ಮಹಮ್ಮದ್ ಹಾಗು ಸಮೀನಾ ಆರ್ ದಂಪತಿಯ ಪುತ್ರ. ಎಣ್ಮೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ.  ಎಣ್ಮೂರು ಶಾಲಾ ಅಧ್ಯಾಪಕರು ಉತ್ತಮ ಫಲಿತಾಂಶಕ್ಕಾಗಿ ಮಾಡಿದ ಶತಪ್ರಯತ್ನಕ್ಕೆ ನಿರೀಕ್ಷೆಗೂ ಮೀರಿ ಪ್ರತಿಫಲ ಮಝೀಫ್‍ನಿಗೆ ದೊರೆತಿದೆ. ಅಂದ ಹಾಗೆ ಮಝೀಫ್ ವಿಶೇಷವಾಗಿ ಗಣಿತದಲ್ಲಿ 100 ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ 125 ಪೂರ್ಣ ಅಂಕಗಳನ್ನು ಪಡೆದುಕೊಂಡಿದ್ದಾನೆ.

ಮರುಮೌಲ್ಯಮಾಪನದಿಂದ 3 ಅಂಕ ಹೆಚ್ಚು ದೊರೆಯಿತು :
ಫಲಿತಾಂಶದಂದು ಕನ್ನಡದಲ್ಲಿ 3 ಅಂಕಗಳು ಕಡಿಮೆ ನಮೂದನೆಗೊಂಡಿದ್ದು, ಉತ್ತರ ಪತ್ರಿಕೆಗಳ ಪ್ರತಿಯನ್ನು ತರಸಿ ಪರಿಶೀಲಿಸಿದಾಗ ಕನ್ನಡದಲ್ಲಿ ಪೂರ್ತಿ 125 ಅಂಕಗಳು ಇದ್ದು ಅಂಕಗಳ ಮರು ಎಣಿಕೆಗೆ ಹಾಕಿದ್ದಾನೆ. ತಪ್ಪು ಎಣಿಕೆಯಿಂದಾಗಿ 610 ಅಂಕಗಳನ್ನು ಗಳಿಸಿದ್ದ ವಿದ್ಯಾರ್ಥಿ ಮಝೀಫ್ ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಪಡೆದುಕೊಂಡು ಸುಳ್ಯ ತಾಲೂಕಿಗೆ ದ್ವಿತೀಯ ಹಾಗು ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

11 minutes ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

12 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

12 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

12 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

13 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

24 hours ago