Advertisement
ನಮ್ಮೂರ ಸುದ್ದಿ

ಎಸ್‍ಎಸ್‍ಎಲ್‍ಸಿ ಮರುಮೌಲ್ಯಮಾಪನದಲ್ಲಿ ಗರಿ ಮುಡಿಗೇರಿಸಿದ ವಿದ್ಯಾರ್ಥಿ

Share

ಬೆಳ್ಳಾರೆ: ಯಾವತ್ತೂ ಯಶಸ್ಸು ಜೊತೆಗೇ ಇರುತ್ತದೆ. ಆದರೆ ಪ್ರಯತ್ನವೆಂಬುದು ಮುಖ್ಯ. ಮಾಡಿರುವ ಪ್ರಯತ್ನಕ್ಕೆ ಯಶಸ್ಸಂತೂ ಇದ್ದೇ ಇದೆ. ಆದರೆ ಕೆಲವೊಮ್ಮೆ ತಡವಾಗಬಹುದು ಅಷ್ಟೇ. ಇದಕ್ಕೆ ಉದಾಹರಣೆ ಎಣ್ಮೂರಿನ  ವಿದ್ಯಾರ್ಥಿ  ಮಹಮ್ಮದ್ ಮಝೀಫ್.

ಈತ ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿ. ತನ್ನ ಜೀವನವನ್ನು ತಾನೇ ರೂಪಸಿಕೊಳ್ಳಬೇಕೆಂಬ ಛಲಕ್ಕೆ ಬಿದ್ದು ಶಾಲಾ ರಜಾ ದಿನಗಳಂದು ಕೇಟರಿಂಗ್‍ನಲ್ಲಿ ದುಡಿಯುತ್ತಿದ್ದ. ಸರಕಾರಿ ಶಾಲೆಯಲ್ಲಿ ಓದಿ ತಾಲೂಕಿಗೆ ದ್ವಿತೀಯ ಹಾಗೂ ಶಾಲೆಗೆ ಮೊದಲಿಗನಾದ. ಇದು ಇತ್ತೀಚೆಗಷ್ಟೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613(ಶೇ98.8) ಗಳಿಸಿದ ಎಣ್ಮೂರಿನ ಮಹಮ್ಮದ್ ಮಝೀಫ್ ಸಾಧನೆಯಾಗಿದೆ. ಮಹಮ್ಮದ್ ಮಝೀಫ್ ಮುರುಳ್ಯ ಗ್ರಾಮದ ರಾಗಿ ಪೇಟೆಯ ಟಿ. ಮಹಮ್ಮದ್ ಹಾಗು ಸಮೀನಾ ಆರ್ ದಂಪತಿಯ ಪುತ್ರ. ಎಣ್ಮೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ.  ಎಣ್ಮೂರು ಶಾಲಾ ಅಧ್ಯಾಪಕರು ಉತ್ತಮ ಫಲಿತಾಂಶಕ್ಕಾಗಿ ಮಾಡಿದ ಶತಪ್ರಯತ್ನಕ್ಕೆ ನಿರೀಕ್ಷೆಗೂ ಮೀರಿ ಪ್ರತಿಫಲ ಮಝೀಫ್‍ನಿಗೆ ದೊರೆತಿದೆ. ಅಂದ ಹಾಗೆ ಮಝೀಫ್ ವಿಶೇಷವಾಗಿ ಗಣಿತದಲ್ಲಿ 100 ಹಾಗೂ ಪ್ರಥಮ ಭಾಷೆ ಕನ್ನಡದಲ್ಲಿ 125 ಪೂರ್ಣ ಅಂಕಗಳನ್ನು ಪಡೆದುಕೊಂಡಿದ್ದಾನೆ.

ಮರುಮೌಲ್ಯಮಾಪನದಿಂದ 3 ಅಂಕ ಹೆಚ್ಚು ದೊರೆಯಿತು :
ಫಲಿತಾಂಶದಂದು ಕನ್ನಡದಲ್ಲಿ 3 ಅಂಕಗಳು ಕಡಿಮೆ ನಮೂದನೆಗೊಂಡಿದ್ದು, ಉತ್ತರ ಪತ್ರಿಕೆಗಳ ಪ್ರತಿಯನ್ನು ತರಸಿ ಪರಿಶೀಲಿಸಿದಾಗ ಕನ್ನಡದಲ್ಲಿ ಪೂರ್ತಿ 125 ಅಂಕಗಳು ಇದ್ದು ಅಂಕಗಳ ಮರು ಎಣಿಕೆಗೆ ಹಾಕಿದ್ದಾನೆ. ತಪ್ಪು ಎಣಿಕೆಯಿಂದಾಗಿ 610 ಅಂಕಗಳನ್ನು ಗಳಿಸಿದ್ದ ವಿದ್ಯಾರ್ಥಿ ಮಝೀಫ್ ಮರುಮೌಲ್ಯಮಾಪನದಲ್ಲಿ 3 ಅಂಕ ಹೆಚ್ಚು ಪಡೆದುಕೊಂಡು ಸುಳ್ಯ ತಾಲೂಕಿಗೆ ದ್ವಿತೀಯ ಹಾಗು ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

9 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

17 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago