Advertisement
ಸುದ್ದಿಗಳು

ಎಸ್‍ಎಸ್‍ಪಿಯು ಕಾಲೇಜಿನಲ್ಲಿ ಮಹಿಳಾ ಸಾಹಿತ್ಯ ಸಂಭ್ರಮ

Share

ಸುಬ್ರಹ್ಮಣ್ಯ: ಕನ್ನಡವು ಪ್ರಪಂಚದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದೆ. ಇದು ಅಪ್ರತಿಮ ಸಾಹಿತ್ಯ ಸಂಪತ್ತನ್ನು ಹೊಂದಿರುವ ಭಾಷೆಯಾಗಿದೆ. ಆಧುನಿಕ ಯುಗದಲ್ಲಿ ನಾವು ನಮ್ಮ ಮಾತೃಭಾಷೆಯ ಕಡೆ ಹೆಚ್ಚು ಹೆಚ್ಚು ಆಕರ್ಷಿತರಾಗಬೇಕು. ಮಕ್ಕಳು ಎಳವೆಯಲ್ಲಿ ಕನ್ನಡವನ್ನು ಬಳಸುವ ಮೂಲಕ ಮಾತೃಭಾಷೆಯ ಪ್ರಗತಿಗೆ ಕಾಣಿಕೆ ನೀಡಬೇಕಾದುದು ಅತ್ಯವಶ್ಯಕ. ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಸಿರಿವಂತಿಕೆಯ ಕುರಿತು ಅರಿವು ಮೂಡಿಸುವ ಮೂಲಕ ಕನ್ನಡದ ಕಂಪನ್ನು ಬೆಳೆಸಲು ಇಂತಹ ಕಾರ್ಯಕ್ರಮಗಳು ಪೂರಕವಾಗಿದೆ. ನಾವು ವ್ಯಾವಹಾರಿಕವಾಗಿ ಇತರ ಭಾಷೆಯನ್ನು ಬಳಸಿ ಕನ್ನಡವನ್ನು ಉಳಿಸಿ ಬೆಳೆಸುವತ್ತ ಹೆಚ್ಚು ಗಮನಹರಿಸಬೇಕು ಎಂದು ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷ ಪಿ. ಸಿ. ಜಯರಾಮ್ ಹೇಳಿದರು.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುವಿಚಾರ ಸಾಹಿತ್ಯ ವೇದಿಕೆ ಸುಳ್ಯ ಇದರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಎಸ್‍ಎಸ್‍ಪಿಯು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಬುಧವಾರ ನಡೆದ ಮಹಿಳಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಜ್ಞಾನದ ಸಂಪತ್ತನ್ನು ನೀಡುತ್ತದೆ. ಜಾನಪದ ಸಾಹಿತ್ಯವು ಪ್ರಾಚೀನತೆಯ ವಿಚಾರಗಳನ್ನು ತೆರೆದಿಡುತ್ತದೆ. ಇವುಗಳು ಎಳೆಯ ಮಕ್ಕಳಿಗೆ ಹಿಂದಿನ ವಿಚಾರಗಳ ಅರಿವನ್ನು ಮೂಡಿಸುತ್ತದೆ ಎಂದರು.

ಜಾನಪದ ಸಾಹಿತ್ಯದಲ್ಲಿ ಸ್ತ್ರೀಸಂವೇದನೆ: ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಪತ್ರಕರ್ತ ಕೃಷ್ಣಮೂರ್ತಿ ಹೆಬ್ಬಾರ್ ಜಾನಪದ ಸಾಹಿತ್ಯದಲ್ಲಿ ಸ್ತ್ರೀ ಸಂವೇದನೆ ಎಂಬ ವಿಚಾರವಾಗಿ ಮಾಹಿತಿ ನೀಡಿದರು. ಕನ್ನಡ ಸಾಹಿತ್ಯದ ಪ್ರಗತಿಗೆ ಜನಪದರ ಪಾತ್ರ ಅನನ್ಯ. ತಮ್ಮ ನಿಜ ಜೀವನದಲ್ಲಿ ನಡೆಯುವ ವಿಚಾರಗಳನ್ನು ಸಾಹಿತ್ಯ ರೂಪದಲ್ಲಿ ಅವರು ತಿಳಿಸಿದ ಪರಿಯು ಅತ್ಯಂತ ಶ್ರೇಷ್ಠವಾದುದು ಎಂದರು.

ಎಸ್‍ಎಸ್‍ಪಿಯು ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ. ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ವಿಭಾಗದ ಮುಖ್ಯಗುರು ಕೆ.ಯಶವಂತ ರೈ, ಸಂಪನ್ಮೂಲ ವ್ಯಕ್ತಿ ಕೃಷ್ಣಮೂರ್ತಿ ಹೆಬ್ಬಾರ್, ಸುವಿಚಾರ ವೇದಿಕೆ ಅಧ್ಯಕ್ಷ ಚಂದ್ರಶೇಖರ ಪೇರಾಲ್, ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಎಸ್‍ಎಸ್‍ಪಿಯು ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕೇಶ್ವರ ಡಿ.ಆರ್ ವೇದಿಕೆಯಲ್ಲಿದ್ದರು. ನಿವೃತ್ತ ಪ್ರಾಂಶುಪಾಲ ಬಾಬು ಗೌಡ ಅಚ್ರಪ್ಪಾಡಿ, ಸಾಹಿತ್ಯ ಪರಿಷತ್‍ನ ಡಾ.ರಂಗಯ್ಯ, ಹಿರಿಯ ಅಧ್ಯಾಪಕ ಎಂ.ಕೃಷ್ಣ ಭಟ್, ಅಧ್ಯಾಪಕ ಮತ್ತು ಕಲಾವಿದ ರಘು ಬಿಜೂರು ಉಪಸ್ಥಿತರಿದ್ದರು.

ಆರಂಭದಲ್ಲಿ ಕಲಾವಿದ ರಘು ಬಿಜೂರು ಮತ್ತು ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ನೆರವೇರಿತು. ಕೆ.ಯಶವಂತ ರೈ ಸ್ವಾಗತಿಸಿದರು. ಎಂ.ಕೃಷ್ಣ ಭಟ್ ಪರಿಚಯಿಸಿದರು. ತೇಜಸ್ವಿ ಕಡಪಳ ವಂದಿಸಿದರು. ಉಪನ್ಯಾಸಕ ರತ್ನಾಕರ.ಎಸ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ರಘು ಬಿಜೂರು ರಚಿಸಿದ ಮಾತೃಶ್ರೀ ಕವನ ಸಂಕಲನವನ್ನು ಗಣ್ಯರಿಗೆ ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

15 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

15 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

15 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

15 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago