ನಿಂತಿಕಲ್ಲಉ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (SSF) ಎಣ್ಮೂರು ಶಾಖೆ ಇದರ ಅರ್ಧ ವಾರ್ಷಿಕ ಮಹಾ ಸಭೆ ಮತ್ತು ಮಾಸಿಕ ಜಲಾಲಿಯ್ಯ ರಾತೀಬ್ ಪಡ್ಪಿನಂಗಡಿಯಲ್ಲಿ ನಡೆಯಿತು.
ಶಾಖಾದ್ಯಕ್ಷರಾದ ಅಬ್ದುಲ್ ರಝಾಕ್ ಕೊಳ್ತಂಗರೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಮುಸ್ತಫ ಸಅದಿ ಎಣ್ಮೂರು ಉದ್ಘಾಟಿಸಿದರು. ಸಭಾ ವೀಕ್ಷಕರಾದ ಜಬ್ಬಾರ್ ಹನೀಫಿ ನಿಂತಿಕಲ್ಲುರವರ ಮೇಲ್ನೋಟದಲ್ಲಿ ನಡೆದ ಸಭೆಯಲ್ಲಿ ಕಾರ್ಯಕಾರಿ ಸಮಿತಿ ಯಲ್ಲಿ ಬದಲಾವಣೆ ತರಲಾಯಿತು. ಅದ್ಯಕ್ಷರಾಗಿ ಅಬ್ದುಲ್ ರಝಾಕ್ ಕೊಳ್ತಂಗೆರೆ, ಉಪಾಧ್ಯಕ್ಷರಾಗಿ ಮಶೂದ್ ಅಹ್ಸನಿ ಎಣ್ಮೂರು ಹಾಗೂ ಶಾಹಿದ್ ಕೆ ಬಿ, ಪ್ರಧಾನ ಕಾರ್ಯದರ್ಶಿಯಾಗಿ ರಹ್ಮಾನ್ ಟಿ.ಎಸ್ ಎಣ್ಮೂರು, ಜೊತೆ ಕಾರ್ಯದರ್ಶಿಗಳಾಗಿ ತ್ವಾಹಾ ಕೆ.ಬಿ ಹಾಗೂ ಖಲೀಲ್ ಮಿರ್ಷಾದ್, ಕೋಶಾಧಿಕಾರಿಯಾಗಿ ನೂರುದ್ದೀನ್ ಅಂಜದಿ ಮತ್ತು 7 ಕಾರ್ಯಕಾರಿ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.
ಕಾರ್ಯದರ್ಶಿ ನೂರುದ್ದೀನ್ ಅಂಜದಿ ಸ್ವಾಗತಿಸಿ ನೂತನ ಕಾರ್ಯದರ್ಶಿ ರಹ್ಮಾನ್ ಟಿ ಎಸ್ ಎಣ್ಮೂರು ವಂದಿಸಿದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…