ಎಸ್ ಎಸ್ ಎಫ್ ನಿಂತಿಕಲ್ಲು ಸೆಕ್ಟರ್ : ಉಲಾಝ್ – 2019

October 1, 2019
12:33 PM

ನಿಂತಿಕಲ್ಲು: ಎಸ್ ಎಸ್ ಎಫ್ ನಿಂತಿಕಲ್ಲು ಸೆಕ್ಟರ್ ವತಿಯಿಂದ ನಡೆದ ನವ ಬದುಕಿಗೊಂದು ದಿಕ್ಸೂಚಿ “ಉಲಾಝ್ – 2019” ಕಾರ್ಯಕ್ರಮವು ಸೆಪ್ಟೆಂಬರ್ 30 ಸೋಮವಾರ ಮಗ್ರಿಬ್ ನಮಾಜಿನ ಬಳಿಕ ನಿಂತಿಕಲ್ಲು ಎಸ್ ಎಸ್ ಎಫ್ ಕಚೇರಿಯಲ್ಲಿ ಸೆಕ್ಟರ್ ಅಧ್ಯಕ್ಷರಾದ ಜಬ್ಬಾರ್ ಹನೀಫಿ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮವನ್ನು ಎಸ್ ಎಸ್ ಎಫ್ ಸುಳ್ಯ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಖಲೀಲ್ ಝುಹುರಿ ನೆಕ್ಕಿಲ ಉದ್ಘಾಟಿಸಿದರು. ನಂತರ ನಡೆದ ಉಸ್ತಾದ್ ಝಿಯಾದ್ ಸಖಾಫಿ ಬಾರೆಬೆಟ್ಟು ಅವರ ಸುನ್ನತ್ ಹಾಗೂ ದಾಈ ಎಂಬ ವಿಷಯದ ಕುರಿತ ತರಗತಿಯೂ ಕಾರ್ಯಕರ್ತರಿಗೆ ಹೊಸ ಹುರುಪನ್ನು ನೀಡಿತು. ನಂತರ ನೆರೆ ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾರ್ಯ ನಿರ್ವಹಣೆ ಮಾಡಿ ಸಮಾಜದಲ್ಲಿ ಗುರುತಿಸಿಕೊಂಡ ಸೆಕ್ಟರ್ ವ್ಯಾಪ್ತಿಯ ಕಾರ್ಯಕರ್ತರಾದ ಅಬೂಬಕ್ಕರ್ ನೆಕ್ಕಿಲ, ರಝಾಕ್ ಕೆ.ಎಚ್ ನೆಕ್ಕಿಲ, ಅಬೂತಾಹಿರ್ ನೆಕ್ಕಿಲ, ಸಂಶುದ್ದೀನ್ ನೆಕ್ಕಿಲ, ಮುಸ್ತಫಾ ಸಮಹಾದಿ, ರಿಯಾಝ್ ನೆಕ್ಕಿಲ, ಸ್ವಾದಿಕ್ ನೆಕ್ಕಿಲ ಅವರನ್ನು ಸೆಕ್ಟರ್ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು.

ನಿಂತಿಕಲ್ಲು ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ರಹ್ಮಾನ್ ಟಿ ಎಸ್ ಎಣ್ಮೂರು ಸ್ವಾಗತಿಸಿದರು. ಸೆಕ್ಟರ್ ಪ್ರ. ಕಾರ್ಯದರ್ಶಿ ರಿಯಾಝ್ ನೆಕ್ಕಿಲ ಅವರು ವಂದಿಸಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ನಿಂತಿಕಲ್ಲು ಉಪಾಧ್ಯಕ್ಷರಾದ ಅಬ್ದುರ್ರಹ್ಮಾನ್ ಪೊಲಾಜೆ, ಎಸ್ ವೈ ಎಸ್ ಕಾರ್ಯಕರ್ತರಾದ ಅಝೀಝ್ ಮುಸ್ಲಿಯಾರ್ ಕಲ್ಲೇರಿ ಮತ್ತು ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror