ಸುದ್ದಿಗಳು

ಎಸ್ ಎಸ್ ಎಫ್ ಸುಳ್ಯ ಡಿವಿಷನ್ ವ್ಯಾಪ್ತಿಯ ಆಯುಷ್ಮಾನ್ ಅಭಿಯಾನಕ್ಕೆ ಕಲ್ಲುಗುಂಡಿಯಲ್ಲಿ ಚಾಲನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ವ್ಯಾಪ್ತಿಯ ಉಚಿತ ಆಯುಷ್ಮಾನ್ ಕಾರ್ಡ್ ವಿತರಣಾ ಅಭಿಯಾನದ ಉದ್ಘಾಟನೆಯು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಸಹಭಾಗಿತ್ವದೊಂದಿಗೆ ಕಲ್ಲುಗುಂಡಿ ಸೊಸೈಟಿಯಲ್ಲಿ ಆಗಸ್ಟ್ 13 ಗುರುವಾರದಂದು ನಡೆಯಿತು.

Advertisement

ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಕುಂಞಿ ಗೂನಡ್ಕರವರ ಅಧ್ಯಕ್ಷತೆಯಲ್ಲಿ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆಯವರು ಶಿಬಿರವನ್ನು ಉದ್ಘಾಟಿಸಿ ಸಂಘಟನೆಯು ಹಮ್ಮಿಕೊಳ್ಳುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಪ್ರಶಂಸಿಸಿದರು. ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ ಮುನ್ನುಡಿ ಭಾಷಣಗೈದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಉಪಾಧ್ಯಕ್ಷರಾದ ಎ.ಮುಹಮ್ಮದ್ ಫೈಝಲ್ ಝುಹ್’ರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಕೆ.ಪಿ. ಜೋನಿ (ತಾಲೂಕು ಅಧ್ಯಕ್ಷರು, ಸಿಐಟಿಯು), ವೀರೇಂದ್ರ ಕುಮಾರ್ (ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಲಿಮಿಟೆಡ್), ಕಮಾಲ್ ಕಡಬ (ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮಾಹಿತಿ ಅಧಿಕಾರಿ), ಗಣಪತಿ ಭಟ್ (ನಿರ್ದೇಶಕರು, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಲಿಮಿಟೆಡ್), ಕಿಶೋರ್ ಕುಮಾರ್ (ಮಾಲಕರು, ಸ್ಪಾಟ್ ಕಂಪ್ಯೂಟರ್ ಕಲ್ಲುಗುಂಡಿ), ಜಿ.ಕೆ.ಹಮೀದ್ ಗೂನಡ್ಕ (ಮಾಜಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಸಂಪಾಜೆ) ಮುಂತಾದವರು ಭಾಗವಹಿಸಿ ಶುಭಹಾರೈಸಿದರು.

ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ, ಕಬೀರ್ ಜಟ್ಟಿಪಳ್ಳ, ರಶೀದ್ ಜಟ್ಟಿಪಳ್ಳ, ಸಿದ್ದೀಖ್ ಗೂನಡ್ಕ, ಅಬ್ದುಲ್ ಕಾದರ್ ಸಂಗಂ, ಜುನೈದ್ ಚಟ್ಟೆಕಲ್ಲು, ಜುನೈದ್ ಸಂಪಾಜೆ, ಫಯಾಝ್ ನೆಲ್ಲಿಕುಮೇರಿ, ನೌಫಲ್ ಕಲ್ಲುಗುಂಡಿ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸ್ವಾದಿಖ್ ಕಲ್ಲುಗುಂಡಿ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು

ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ

ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.

ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್‌ ಆನ್ಸ್‌ ಶಾಲೆ ಕಡಬ | -…

7 hours ago

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ

ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…

9 hours ago

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…

9 hours ago