Advertisement
ಸುದ್ದಿಗಳು

ಎಸ್ ಎಸ್ ಎಫ್ ಸುಳ್ಯ ಡಿವಿಷನ್ ವ್ಯಾಪ್ತಿಯ ಆಯುಷ್ಮಾನ್ ಅಭಿಯಾನಕ್ಕೆ ಕಲ್ಲುಗುಂಡಿಯಲ್ಲಿ ಚಾಲನೆ

Share

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ವ್ಯಾಪ್ತಿಯ ಉಚಿತ ಆಯುಷ್ಮಾನ್ ಕಾರ್ಡ್ ವಿತರಣಾ ಅಭಿಯಾನದ ಉದ್ಘಾಟನೆಯು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಸಹಭಾಗಿತ್ವದೊಂದಿಗೆ ಕಲ್ಲುಗುಂಡಿ ಸೊಸೈಟಿಯಲ್ಲಿ ಆಗಸ್ಟ್ 13 ಗುರುವಾರದಂದು ನಡೆಯಿತು.

ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷರಾದ ಮುಹಮ್ಮದ್ ಕುಂಞಿ ಗೂನಡ್ಕರವರ ಅಧ್ಯಕ್ಷತೆಯಲ್ಲಿ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆಯವರು ಶಿಬಿರವನ್ನು ಉದ್ಘಾಟಿಸಿ ಸಂಘಟನೆಯು ಹಮ್ಮಿಕೊಳ್ಳುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು ಪ್ರಶಂಸಿಸಿದರು. ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ ಮುನ್ನುಡಿ ಭಾಷಣಗೈದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಉಪಾಧ್ಯಕ್ಷರಾದ ಎ.ಮುಹಮ್ಮದ್ ಫೈಝಲ್ ಝುಹ್’ರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಕೆ.ಪಿ. ಜೋನಿ (ತಾಲೂಕು ಅಧ್ಯಕ್ಷರು, ಸಿಐಟಿಯು), ವೀರೇಂದ್ರ ಕುಮಾರ್ (ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಲಿಮಿಟೆಡ್), ಕಮಾಲ್ ಕಡಬ (ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮಾಹಿತಿ ಅಧಿಕಾರಿ), ಗಣಪತಿ ಭಟ್ (ನಿರ್ದೇಶಕರು, ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಲಿಮಿಟೆಡ್), ಕಿಶೋರ್ ಕುಮಾರ್ (ಮಾಲಕರು, ಸ್ಪಾಟ್ ಕಂಪ್ಯೂಟರ್ ಕಲ್ಲುಗುಂಡಿ), ಜಿ.ಕೆ.ಹಮೀದ್ ಗೂನಡ್ಕ (ಮಾಜಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಸಂಪಾಜೆ) ಮುಂತಾದವರು ಭಾಗವಹಿಸಿ ಶುಭಹಾರೈಸಿದರು.

ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ, ಕಬೀರ್ ಜಟ್ಟಿಪಳ್ಳ, ರಶೀದ್ ಜಟ್ಟಿಪಳ್ಳ, ಸಿದ್ದೀಖ್ ಗೂನಡ್ಕ, ಅಬ್ದುಲ್ ಕಾದರ್ ಸಂಗಂ, ಜುನೈದ್ ಚಟ್ಟೆಕಲ್ಲು, ಜುನೈದ್ ಸಂಪಾಜೆ, ಫಯಾಝ್ ನೆಲ್ಲಿಕುಮೇರಿ, ನೌಫಲ್ ಕಲ್ಲುಗುಂಡಿ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸ್ವಾದಿಖ್ ಕಲ್ಲುಗುಂಡಿ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

4 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

11 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

22 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago