ಬೆಳ್ಳಾರೆ: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ಸಮಿತಿಯ ವಾರ್ಷಿಕ ಮಹಾಸಭೆಯು ಬೆಳ್ಳಾರೆ ಸುನ್ನೀ ಸೆಂಟರಿನಲ್ಲಿ ಸಮಿತಿಯ ಅಧ್ಯಕ್ಷರಾದ ಜಿ. ಕೆ ಇಬ್ರಾಹಿಂ ಅಮ್ಜದಿಯವರ ಅಧ್ಯಕ್ಷತೆಯಲ್ಲಿ ಜರಗಿತು. ದಾರುಲ್ ಹಿಕ್ಮ ಅಧ್ಯಕ್ಷರಾದ ಹಸನ್ ಸಖಾಫಿ ಬೆಳ್ಳಾರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ವರದಿ ವಾಚಿಸಿ, ಕೋಶಾಧಿಕಾರಿ ಹಸೈನಾರ್ ನೆಕ್ಕಿಲ ಲೆಕ್ಕಪತ್ರ ಮಂಡಿಸಿದರು. ನಂತರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಜಿ.ಕೆ ಇಬ್ರಾಹಿಂ ಅಮ್ಜದಿ ಮಂಡೆಕೋಲು(ಅಧ್ಯಕ್ಷರು), ಫೈಝಲ್ ಝುಹ್ರಿ ಕಲ್ಲುಗುಂಡಿ, ಖಲೀಲ್ ಝುಹ್ರಿ ನೆಕ್ಕಿಲ(ಉಪಾಧ್ಯಕ್ಷರು), ಸಿರಾಜುದ್ದೀನ್ ಹಿಮಮಿ ಕುಂಬಕ್ಕೋಡು(ಪ್ರ. ಕಾರ್ಯದರ್ಶಿ), ಸಫ್ವಾನ್ ಸುಣ್ಣಮೂಲೆ, ರಿಯಾಝ್ ನೆಕ್ಕಿಲ(ಜೊತೆ ಕಾರ್ಯದರ್ಶಿಗಳು), ಸ್ವಾದಿಖ್ ಕಲ್ಲುಗುಂಡಿ(ಕ್ಯಾಂಪಸ್ ಕಾರ್ಯದರ್ಶಿ), ಹಸೈನಾರ್ ನೆಕ್ಕಿಲ(ಕೋಶಾಧಿಕಾರಿ), ಜುನೈದ್ ಸಖಾಫಿ ಜೀರ್ಮುಕ್ಕಿ, ಅಬ್ದುರ್ರಹ್ಮಾನ್ ಸಖಾಫಿ ಟಿ.ಎಂ, ಅಬ್ದುನ್ನಾಸಿರ್ ಬಾ ಹಸನಿ, ಮುನೀರ್ ಹನೀಫಿ, ಕಲಾಂ ಝುಹ್ರಿ, ಸ್ವಬಾಹ್ ಹಿಮಮಿ ಸಖಾಫಿ, ಸಿರಾಜ್ ಸಅದಿ, ಸಿದ್ದೀಖ್ ಗೂನಡ್ಕ, ನೌಶಾದ್ ಕೆರೆಮೂಲೆ, ಶಮೀರ್ ಡಿ. ಎಚ್(ಸದಸ್ಯರುಗಳು) ಆಗಿ ಆಯ್ಕೆಗೊಂಡರು.
ವೀಕ್ಷಕರಾಗಿ ದ.ಕ ಈಸ್ಟ್ ಝೋನ್ ಪ್ರ. ಕಾರ್ಯದರ್ಶಿ ಶಫೀಕ್ ಮಾಸ್ಟರ್ ತಿಂಗಳಾಡಿ ಆಗಮಿಸಿ ಮಹಾಸಭೆಯ ಪ್ರಕ್ರಿಯೆಗಳನ್ನು ನಡೆಸಿದರು. ಜಿಲ್ಲಾ ನಾಯಕರಾದ ತೌಸೀಫ್ ಸಅದಿ ತರಗತಿ ಮಂಡಿಸಿದರು. ಡಿವಿಷನ್ ಉಸ್ತುವಾರಿ ಶಾಹುಲ್ ಹಮೀದ್ ಸಖಾಫಿ ಪಾಣಾಜೆ, ಝೋನ್ ಬ್ಲಡ್ ಸೈಬೋ ಅಮೀರ್ ಇಮ್ರಾನ್ ರೆಂಜಲಾಡಿ, ಡಿವಿಷನ್ ಮಾಜಿ ಪ್ರ.ಕಾರ್ಯದರ್ಶಿ ಸಂಶುದ್ದೀನ್ ಪಳ್ಳಿಮಜಲು ಮುಖ್ಯ ಅತಿಥಿಗಳಾಗಿದ್ದರು. ಜೊತೆ ಕಾರ್ಯದರ್ಶಿ ಮುನೀರ್ ಹನೀಫಿ ಸ್ವಾಗತಿಸಿ, ನೂತನ ಪ್ರ. ಕಾರ್ಯದರ್ಶಿ ಸಿರಾಜುದ್ದೀನ್ ಹಿಮಮಿ ಕುಂಬಕ್ಕೋಡು ವಂದಿಸಿದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…