ಬೆಳ್ಳಾರೆ: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ಸಮಿತಿಯ ವಾರ್ಷಿಕ ಮಹಾಸಭೆಯು ಬೆಳ್ಳಾರೆ ಸುನ್ನೀ ಸೆಂಟರಿನಲ್ಲಿ ಸಮಿತಿಯ ಅಧ್ಯಕ್ಷರಾದ ಜಿ. ಕೆ ಇಬ್ರಾಹಿಂ ಅಮ್ಜದಿಯವರ ಅಧ್ಯಕ್ಷತೆಯಲ್ಲಿ ಜರಗಿತು. ದಾರುಲ್ ಹಿಕ್ಮ ಅಧ್ಯಕ್ಷರಾದ ಹಸನ್ ಸಖಾಫಿ ಬೆಳ್ಳಾರೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ವರದಿ ವಾಚಿಸಿ, ಕೋಶಾಧಿಕಾರಿ ಹಸೈನಾರ್ ನೆಕ್ಕಿಲ ಲೆಕ್ಕಪತ್ರ ಮಂಡಿಸಿದರು. ನಂತರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಜಿ.ಕೆ ಇಬ್ರಾಹಿಂ ಅಮ್ಜದಿ ಮಂಡೆಕೋಲು(ಅಧ್ಯಕ್ಷರು), ಫೈಝಲ್ ಝುಹ್ರಿ ಕಲ್ಲುಗುಂಡಿ, ಖಲೀಲ್ ಝುಹ್ರಿ ನೆಕ್ಕಿಲ(ಉಪಾಧ್ಯಕ್ಷರು), ಸಿರಾಜುದ್ದೀನ್ ಹಿಮಮಿ ಕುಂಬಕ್ಕೋಡು(ಪ್ರ. ಕಾರ್ಯದರ್ಶಿ), ಸಫ್ವಾನ್ ಸುಣ್ಣಮೂಲೆ, ರಿಯಾಝ್ ನೆಕ್ಕಿಲ(ಜೊತೆ ಕಾರ್ಯದರ್ಶಿಗಳು), ಸ್ವಾದಿಖ್ ಕಲ್ಲುಗುಂಡಿ(ಕ್ಯಾಂಪಸ್ ಕಾರ್ಯದರ್ಶಿ), ಹಸೈನಾರ್ ನೆಕ್ಕಿಲ(ಕೋಶಾಧಿಕಾರಿ), ಜುನೈದ್ ಸಖಾಫಿ ಜೀರ್ಮುಕ್ಕಿ, ಅಬ್ದುರ್ರಹ್ಮಾನ್ ಸಖಾಫಿ ಟಿ.ಎಂ, ಅಬ್ದುನ್ನಾಸಿರ್ ಬಾ ಹಸನಿ, ಮುನೀರ್ ಹನೀಫಿ, ಕಲಾಂ ಝುಹ್ರಿ, ಸ್ವಬಾಹ್ ಹಿಮಮಿ ಸಖಾಫಿ, ಸಿರಾಜ್ ಸಅದಿ, ಸಿದ್ದೀಖ್ ಗೂನಡ್ಕ, ನೌಶಾದ್ ಕೆರೆಮೂಲೆ, ಶಮೀರ್ ಡಿ. ಎಚ್(ಸದಸ್ಯರುಗಳು) ಆಗಿ ಆಯ್ಕೆಗೊಂಡರು.
ವೀಕ್ಷಕರಾಗಿ ದ.ಕ ಈಸ್ಟ್ ಝೋನ್ ಪ್ರ. ಕಾರ್ಯದರ್ಶಿ ಶಫೀಕ್ ಮಾಸ್ಟರ್ ತಿಂಗಳಾಡಿ ಆಗಮಿಸಿ ಮಹಾಸಭೆಯ ಪ್ರಕ್ರಿಯೆಗಳನ್ನು ನಡೆಸಿದರು. ಜಿಲ್ಲಾ ನಾಯಕರಾದ ತೌಸೀಫ್ ಸಅದಿ ತರಗತಿ ಮಂಡಿಸಿದರು. ಡಿವಿಷನ್ ಉಸ್ತುವಾರಿ ಶಾಹುಲ್ ಹಮೀದ್ ಸಖಾಫಿ ಪಾಣಾಜೆ, ಝೋನ್ ಬ್ಲಡ್ ಸೈಬೋ ಅಮೀರ್ ಇಮ್ರಾನ್ ರೆಂಜಲಾಡಿ, ಡಿವಿಷನ್ ಮಾಜಿ ಪ್ರ.ಕಾರ್ಯದರ್ಶಿ ಸಂಶುದ್ದೀನ್ ಪಳ್ಳಿಮಜಲು ಮುಖ್ಯ ಅತಿಥಿಗಳಾಗಿದ್ದರು. ಜೊತೆ ಕಾರ್ಯದರ್ಶಿ ಮುನೀರ್ ಹನೀಫಿ ಸ್ವಾಗತಿಸಿ, ನೂತನ ಪ್ರ. ಕಾರ್ಯದರ್ಶಿ ಸಿರಾಜುದ್ದೀನ್ ಹಿಮಮಿ ಕುಂಬಕ್ಕೋಡು ವಂದಿಸಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…