ಮಂಗಳೂರು : 2019-20ರ ಶೈಕ್ಷಣಿಕ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 42 ಶಾಲೆಗಳಲ್ಲಿ 6,7, 8, 9 ಮತ್ತು 10ನೇ ತರಗತಿಗಳಲ್ಲಿ ಒಟ್ಟು 2568 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿರುತ್ತಾರೆ. ಈ ಪೈಕಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ 39 ಶಾಲೆಗಳ ಒಟ್ಟು 924 ವಿದ್ಯಾರ್ಥಿಗಳಲ್ಲಿ 917 ವಿದ್ಯಾರ್ಥಿಗಳು ಪಾಸಾಗಿದ್ದು ಶೇಕಡಾ 99% ಫಲಿತಾಂಶ ದಾಖಲಿಸಿದ್ದಾರೆ. 234 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿರುತ್ತಾರೆ.
ತುಳುವಿನಲ್ಲಿ ಉತ್ತಮ ಸಾಧನೆ ದಾಖಲಿಸುವ ಮೂಲಕ ಶಾಲೆಗಳ ಫಲಿತಾಂಶ ಹಾಗೂ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಏರಿಕೆಯಾಗಿರುವುದು ಕಂಡು ಬರುತ್ತದೆ. ಇದಕ್ಕೆ ಕಾರಣರಾದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಗಳ ಮುಖ್ಯ ಶಿಕ್ಷಕರು, ತುಳು ಭಾಷಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ತುಳು ಪಠ್ಯ ಭೋದನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಆಯ್ಕೆ ಮಾಡುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತಿದ್ದು ಈ ಮೂಲಕ ಶಾಲೆಗಳು ಕೂಡಾ ಫಲಿತಾಂಶದಲ್ಲಿ ದಾಖಲೆ ನಿರ್ಮಿಸುತ್ತಿದೆ. ಹಾಗೂ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳ ಶಿಕ್ಷಕ ವರ್ಗ ಹಾಗೂ ಆಡಳಿತ ಮಂಡಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…