ಮಂಗಳೂರು : 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯಿಂದಾಗಿ ಮುಂದೂಡಲಾಗಿರುತ್ತದೆ. ದೂರದರ್ಶನದಲ್ಲಿ ಕನ್ನಡ, ಇಂಗ್ಷಿಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ಸಿದ್ಧಪಡಿಸಿರುವ ಪಾಠಗಳನ್ನು ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ 4.30 ಗಂಟೆವರೆಗೆ ದೂರದರ್ಶನದಲ್ಲಿ ಪ್ರಸಾರ (ಚಂದನ ವಾಹಿನಿಯಲ್ಲಿ) ಮಾಡಲಾಗುತ್ತಿದೆ. ಇದೇ ಕಾರ್ಯಕ್ರಮದ ಮರು ಪ್ರಸಾರವನ್ನು ಮರುದಿನ ಬೆಳಿಗ್ಗೆ 6 ಗಂಂಟೆಯಿಂದ 7.30 ರವರೆಗೆ ಎಲ್ಲಾ ದಿನಗಳಂದು ನಡೆಸಲಾಗುವುದು.
ಬೇಸಿಗೆ ರಜಾ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಲು ಅವರ ಸೃಜನಾತ್ಮಕತೆಯನ್ನು ಪ್ರೋತ್ಸಾಹಿಸಲು ಹಾಗೂ ಮನರಂಜನೆಗಾಗಿ ‘ಮಕ್ಕಳವಾಣಿ’ ಎಂಬ ಕಾರ್ಯಕ್ರಮ ಮಕ್ಕಳವಾಣಿ ಯೂಟ್ಯೂಬ್ ಚಾನಲ್ನಲ್ಲಿ ಈಗಾಗಲೇ ಪ್ರಸಾರವಾಗುತ್ತಿದೆ. ಸದರಿ ಕಾರ್ಯಕ್ರಮವನ್ನು ಮತ್ತೊಮ್ಮೆ ದೂರದರ್ಶನದ (ಚಂದನ ವಾಹಿನಿಯಲ್ಲಿ) ಮೂಲಕ ಏಪ್ರಿಲ್ 29 ರಿಂದ ಮೇ. 28 ರವರೆಗೆ ಸಂಜೆ 5 ಗಂಟೆಯಿಂದ 5.30 ರವರೆಗೆ ಪ್ರಸಾರ ಮಾಡಲಾಗುವುದು. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು ಪರೀಕ್ಷಾ ಸಿದ್ಧತೆಯನ್ನು ಮಾಡಿಕೊಳ್ಳಲು ಹಾಗೂ ಜ್ಞಾನಾರ್ಜನೆಯನ್ನು ಮಾಡಿಕೊಳ್ಳಲು ಅನುಕೂಲವಾಗುವುದು ಎಂದು ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…