ಮಂಗಳೂರು : 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯಿಂದಾಗಿ ಮುಂದೂಡಲಾಗಿರುತ್ತದೆ. ದೂರದರ್ಶನದಲ್ಲಿ ಕನ್ನಡ, ಇಂಗ್ಷಿಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ಸಿದ್ಧಪಡಿಸಿರುವ ಪಾಠಗಳನ್ನು ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ 4.30 ಗಂಟೆವರೆಗೆ ದೂರದರ್ಶನದಲ್ಲಿ ಪ್ರಸಾರ (ಚಂದನ ವಾಹಿನಿಯಲ್ಲಿ) ಮಾಡಲಾಗುತ್ತಿದೆ. ಇದೇ ಕಾರ್ಯಕ್ರಮದ ಮರು ಪ್ರಸಾರವನ್ನು ಮರುದಿನ ಬೆಳಿಗ್ಗೆ 6 ಗಂಂಟೆಯಿಂದ 7.30 ರವರೆಗೆ ಎಲ್ಲಾ ದಿನಗಳಂದು ನಡೆಸಲಾಗುವುದು.
ಬೇಸಿಗೆ ರಜಾ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ತೊಡಗಿಸಲು ಅವರ ಸೃಜನಾತ್ಮಕತೆಯನ್ನು ಪ್ರೋತ್ಸಾಹಿಸಲು ಹಾಗೂ ಮನರಂಜನೆಗಾಗಿ ‘ಮಕ್ಕಳವಾಣಿ’ ಎಂಬ ಕಾರ್ಯಕ್ರಮ ಮಕ್ಕಳವಾಣಿ ಯೂಟ್ಯೂಬ್ ಚಾನಲ್ನಲ್ಲಿ ಈಗಾಗಲೇ ಪ್ರಸಾರವಾಗುತ್ತಿದೆ. ಸದರಿ ಕಾರ್ಯಕ್ರಮವನ್ನು ಮತ್ತೊಮ್ಮೆ ದೂರದರ್ಶನದ (ಚಂದನ ವಾಹಿನಿಯಲ್ಲಿ) ಮೂಲಕ ಏಪ್ರಿಲ್ 29 ರಿಂದ ಮೇ. 28 ರವರೆಗೆ ಸಂಜೆ 5 ಗಂಟೆಯಿಂದ 5.30 ರವರೆಗೆ ಪ್ರಸಾರ ಮಾಡಲಾಗುವುದು. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು ಪರೀಕ್ಷಾ ಸಿದ್ಧತೆಯನ್ನು ಮಾಡಿಕೊಳ್ಳಲು ಹಾಗೂ ಜ್ಞಾನಾರ್ಜನೆಯನ್ನು ಮಾಡಿಕೊಳ್ಳಲು ಅನುಕೂಲವಾಗುವುದು ಎಂದು ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…